ಗೋಣಿಕೊಪ್ಪಲಿನ ಐ.ಸಿ.ಎ.ಆರ್ - ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಕಾಳುಮೆಣಸಿನ ಸಸ್ಯ ಆರೋಗ್ಯ ನಿರ್ವಹಣೆಗೆ ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹ ಎಂಬ ಸೂಕ್ಷಾ÷್ಮಣು ಜೀವಿಗಳ ಗೊಬ್ಬರವನ್ನು ಬಳಸಲು ಶಿ¥s಼Áರಸ್ಸು ಮಾಡಲಾಗಿದೆ. ಜಿಲ್ಲೆಯ ರೈತರು ಈ ಸೂಕ್ಷಾ÷್ಮಣು ಜೀವಿಗಳ ಸಮೂಹ ವನ್ನು ಕಾಳುಮೆಣಸಿನಲ್ಲಿ ಬಳಸಿ ಇಳುವರಿಯನ್ನು ಹೆಚ್ಚಿಸಿಕೊಳ್ಳ ಬೇಕೆಂದು ಕೃಷಿ ವಿಜ್ಞಾನ ಕೇಂದ್ರ ರೈತರಲ್ಲಿ ಮನವಿಯನ್ನು ಮಾಡಿದೆ.

ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ಕಾಳುಮೆಣಸಿಗೆ ಬಳಸುವುದರಿಂದ ಶೀಘ್ರ ಸೊರಗು ರೋಗವನ್ನು ಹತೋಟಿ ಮಾಡಲು, ಬಳ್ಳಿ ಹಳದಿಯಾಗುವುದನ್ನು ತಪ್ಪಿಸಲು ಮತ್ತು ಕೊತ್ತು ಬೀಳುವ ಸಮಸ್ಯೆಯನ್ನು ಕಡಿಮೆಮಾಡಲು ಸಹಾಯವಾಗುತ್ತದೆ.

ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವು ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಗುಣ ವಿಶೇಷತೆಯ ಪ್ರಾಮುಖ್ಯತೆಯನ್ನು ಪಡೆದಿರುತ್ತವೆೆ. ಪ್ರಸ್ತುತ ಸೂಕ್ಷಾ÷್ಮಣು ಜೀವಿಗಳ ಬಳಕೆ ಬಗ್ಗೆ ಸರಿಯಾದ ಮಾಹಿತಿಯಿಲ್ಲದಿರುವುದರಿಂದ, ಜೈವಿಕ ಸಂಪನ್ಮೂಲಗಳ ಮತ್ತು ತಂತ್ರಜ್ಞಾನದ ಕೊರೆತೆಯಿಂದಾಗಿ ಸೂಕ್ಷಾ÷್ಮಣು ಜೀವಿಗಳ ಬಳಕೆ ಕಡಿಮೆಯಾಗಿರುತ್ತದೆ. ಈ ಕೊರತೆ ಯನ್ನು ನೀಗಿಸಲು ಮತ್ತು ಒಂದೇ ರೀತಿಯ ಸೂಕ್ಷಾ÷್ಮಣು ಜೀವಿಗಳ ಬಳಕೆಯಿಂದ ಉಂಟಾಗುವ ಅಧಿಕ ಖರ್ಚು ಮತ್ತು ಕಡಿಮೆ ಕಾರ್ಯ ಕ್ಷಮತೆಯ ನ್ಯೂನತೆಯನ್ನು ಹೋಗಲಾಡಿಸಲು ಭಾರತೀಯ ತೋಟಗಾರಿಕಾ ಸಂಶೋಧನ ಸಂಸ್ಥೆ, ಬೆಂಗಳೂರುರವರು ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ಉತ್ಕöÈಷ್ಟ ತಂತ್ರಜ್ಞಾನದೊAದಿಗೆ ಅಭಿವೃದ್ಧಿಪಡಿಸಿರುತ್ತಾರೆ. ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವು ಕೃಷಿ ವಿಜ್ಞಾನ ಕೇಂದ್ರದಲ್ಲಿ ಲಭ್ಯವಿದ್ದು, ಜಿಲ್ಲೆಯ ರೈತರು ಇದರ ಪ್ರಯೋಜನ ವನ್ನು ಪಡೆಯ ಬಹುದಾಗಿದೆ.

ಸೂಕ್ಷಾ÷್ಮಣು ಜೀವಿಗಳ ಸಮೂಹದ ಉಪಯೋಗಗಳು

ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ (ಅಜಟೋಬ್ಯಾಕ್ಟರ್ ಟ್ರೋಪಿಕಾಲಸ್, ಬೆಸಿಲ್ಲಸ್ ಆರ್ಯಭಟ ಮತ್ತು ಸುಡೋ ಮೋನಾಸ್ ಥಾಯ್ವಾನೆನ್ಸಿಸ್) ಕಾರ್ಯಕ್ಷಮತೆಯನ್ನು ಹೊಂದಿರುತ್ತದೆ.

ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ಕಾಳುಮೆಣಸಿಗೆ ಬಳಸುವುದರಿಂದ ಬಳ್ಳಿಗಳು ಹೊಸದಾಗಿ ಚಿಗುರು ಬರಲು, ಶೀಘ್ರ ಸೊರಗು ರೋಗವನ್ನು ಹತೋಟಿ ಮಾಡಲು, ಕೊತ್ತು ಬೀಳುವ ಸಮಸ್ಯೆಯನ್ನು ಕಡಿಮೆ ಮಾಡಲು ಮತ್ತು ಉತ್ತಮವಾಗಿ ಬೇರು ಬರಲು ಸಹಾಯವಾಗುತ್ತದೆ. ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹದ ಬಳಕೆಯಿಂದ ಸಸ್ಯದ ಬೆಳವಣಿಗೆ, ರೋಗ ನಿಯಂತ್ರಣ ಮತ್ತು ಇಳುವರಿ ಅಧಿಕಗೊಳ್ಳುತ್ತದೆ. ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ಬೀಜೋಪಚಾರ, ಕೊಟ್ಟಿಗೆ ಗೊಬ್ಬರ ಮತ್ತು ಬೇವಿನ ಹಿಂಡಿಯ ಜೊತೆ ಮಿಶ್ರಣ ಮಾಡಿ ರೈತರು ಸುಲಭವಾಗಿ ಬಳಸಬಹುದು. ಸಾರಜನಕವನ್ನು ಸ್ಥಿರೀಕರಿಸುವ, ರಂಜಕ ಮತ್ತು ಸತುವನ್ನು ಕರಗಿಸುವ ಹಾಗೂ ಸಸ್ಯ ಬೆಳವಣಿಗೆಯನ್ನು ಪ್ರಚೋದಿಸುವ ಸೂಕ್ಷಾ÷್ಮಣು ಜೀವಿಗಳನ್ನು ಬೇರೆ ಬೇರೆಯಾಗಿ ಹಾಕುವ ಅವಶ್ಯಕತೆಯಿಲ್ಲದೆ ರೈತರು ವಿವಿಧ ಬೆಳೆಗಳಿಗೆ ಬಳಸಬಹುದು. ಶಿಫಾರಸ್ಸು ಮಾಡಿದ ಸಾರಜನಕ ಮತ್ತು ರಂಜಕಯುಕ್ತ ಗೊಬ್ಬರಗಳಲ್ಲಿ ಶೇ. ೨೫ ರಷ್ಟು ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಬಳಸುವ ವಿಧಾನ

ಕೊಟ್ಟಿಗೆ ಗೊಬ್ಬರ ಅಥವಾ ಕಹಿಬೇವಿನ ಹಿಂಡಿಗೆ ಸೇರಿಸುವ ವಿಧಾನ: ೫ ಕೆ.ಜಿ. ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ೫೦೦ ಕೆ.ಜಿ. ಕೊಟ್ಟಿಗೆ ಗೊಬ್ಬರ ಅಥವಾ ೨ ಕೆ.ಜಿ. ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹವನ್ನು ೧೦೦ ಕೆ.ಜಿ. ಕಹಿ ಬೇವಿನ ಹಿಂಡಿಯ ಜೊತೆ ಚೆನ್ನಾಗಿ ಮಿಶ್ರಣ ಮಾಡಿ ಕಾಳುಮೆಣಸು ಬೆಳೆಗಳಿಗೆ ಉಪಯೋಗಿಸಬೇಕು.

ಬೆಳೆಗಳಿಗೆ ನೇರವಾಗಿ ಉಪಯೋಗಿಸುವ ವಿಧಾನ: ೪ ಕೆ.ಜಿ. ಅರ್ಕಾ ಸೂಕ್ಷಾ÷್ಮಣು ಜೀವಿಗಳ ಸಮೂಹ, ಒಂದು ಕೆ.ಜಿ. ಬೆಲ್ಲ, ೧೦ ಲೀಟರ್ ಗಂಜಳ ಮತ್ತು ೧೦ ಕೆ.ಜಿ. ಸಗಣಿಯನ್ನು ೨೦೦ ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ೧೨ ಗಂಟೆಗಳ ಕಾಲ ಇಟ್ಟು ಕಾಳು ಮೆಣಸಿನ ಗಿಡದ ಬುಡ ಭಾಗಕ್ಕೆ ನೇರವಾಗಿ (೪ ರಿಂದ ೫ ಲೀಟರ್ ನಷ್ಟು) ಸೆಪ್ಟಂಬರ್-ಅಕ್ಟೋಬರ್ ತಿಂಗಳಿನಲ್ಲಿ ಸುರಿಯಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.