ಗೋಣಿಕೊಪ್ಪಲು, ಸೆ. ೨: ಕಾಂಗ್ರೆಸ್ ಪಕ್ಷಕ್ಕೆ ಯುವಕರು ಇತ್ತೀಚೆಗೆ ಹೆಚ್ಚಾಗಿ ಸೇರ್ಪಡೆಯಾಗುತ್ತಿದ್ದು ಮುಂದೆ ಅಧಿಕಾರ ಪಡೆಯು ತ್ತೇವೆಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ವಿಶ್ವಾಸ ವ್ಯಕ್ತಪಡಿಸಿದರು.

ಪೊನ್ನಂಪೇಟೆಯ ಖಾಸಗಿ ಹೊಟೇಲ್‌ನಲ್ಲಿ ವಲಯ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಕ್ಷದ ಸಭೆಯಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಇವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಮುಂದಿನ ದಿನದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು ಎಲ್ಲಾ ವರ್ಗದ ಜನರಿಗೆ ನ್ಯಾಯ ಸಿಗಲಿದೆ. ಯುವಕರಿಗೆ ಉದ್ಯೋಗವು ಲಭಿಸಲಿದೆ. ಪ್ರತಿ ವಾರ್ಡ್ ಮಟ್ಟದಲ್ಲಿ ಪಕ್ಷವನ್ನು ಮತ್ತೊಮ್ಮೆ ಸಂಘಟಿಸುವAತೆ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಜಿಲ್ಲೆಯ ಎಲ್ಲಾ ಭಾಗದಲ್ಲಿಯೂ ಪಕ್ಷದ ಬಗ್ಗೆ ಜನತೆಗೆ ಒಲವಿದ್ದು ಮುಂದಿನ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದರು. ಸಭೆಯಲ್ಲಿ ಮಾಜಿ ಜಿ.ಪಂ. ಸದಸ್ಯ ಮೂಕಳೇರ ಕುಶಾಲಪ್ಪ, ಡಿಸಿಸಿ ಸದಸ್ಯ ಕೊಲ್ಲಿರ ಬೋಪಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೋಳೇರ ಭಾರತಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಲೀರ ರಶೀದ್ ಮುಂತಾದವರು ಮಾತನಾಡಿದರು.

ಪಕ್ಷದ ಮುಖಂಡರಾದ ಮತ್ರಂಡ ದಿಲ್ಲು, ತೀತಮಾಡ ಸುಗುಣ ಸೋಮಯ್ಯ, ತೀತಿರ ಜಯ, ಮೂಕಳೇರ ಅಪ್ಪಣ್ಣ, ಕೋಳೇರ ದಿನು, ಬಾಪುಟ್ಟಿ, ಅಡ್ಡಂಡ ಡಾಲಿ, ಸುನೀಲ್, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸದಸ್ಯರಾದ ಮೂಕಳೇರ ಸುಮಿತ, ಅಣ್ಣಿರ ಹರೀಶ್, ಜುನೈದ್, ಕರ್ತಮಾಡ ರಸಿಕ, ನೇತ್ರಾವತಿ, ಯಮುನಾ ಮುಂತಾದವರು ಉಪಸ್ಥಿತರಿದ್ದರು.