ಮಡಿಕೇರಿ, ಸೆ. ೨: ನಗರದ ಬ್ರಹ್ಮ ಕುಮಾರೀಸ್ ಲೈಟ್‌ಹೌಸ್ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಲೈಟ್‌ಹೌಸ್‌ನ ಜಿಲ್ಲಾ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಗಾಯತ್ರಿಜೀ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮಹತ್ವದ ಬಗ್ಗೆ ತಿಳಿಸಿದರು. ಸಹೋದರ, ಸಹೋದರಿಯರು ಜನ್ಮಾಷ್ಟಮಿಯಲ್ಲಿ ಪಾಲ್ಗೊಂಡರು. ವಿಶೇಷ ಪೂಜೆಯ ನಂತರ ಪ್ರಸಾದ ವಿನಿಯೋಗವಾಯಿತು.