ಮಡಿಕೇರಿ, ಸೆ. ೮: ಕರ್ನಾಟಕ ಅರೆಭಾಷೆ ಅಕಾಡೆಮಿ ಮತ್ತು ಸಾಹಿತ್ಯ ಅಕಾಡೆಮಿ, ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಐ.ಕ್ಯೂ.ಎ.ಸಿ. ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ವತಿಯಿಂದ ಏರ್ಪಡಿಸಲಾಗಿರುವ ಅರೆಭಾಷೆ ಸಂಸ್ಕೃತಿ ಶಿಬಿರವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಉದ್ಘಾಟಿಸಿದರು. ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ಅಕಾಡೆಮಿಯ ಸದಸ್ಯರುಗಳಾದ ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ್ ಮೋಂಟಡ್ಕ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಉಮೇಶ್ ಮಕ್ಕಿ ಮತ್ತು ಪವಿತ್ರಾ ಹೇಮಂತ್ ದೊಡ್ಡಮನೆ ಭಾಗವಹಿಸಿದ್ದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಡಾ. ಗೋವಿಂದ ಎನ್.ಎಸ್., ಕಾಲೇಜಿನ ಅರೆಭಾಷೆ ಸಂಘದ ಸಂಚಾಲಕಿ ಸುಮಿತ್ರಾ, ಅರೆಭಾಷೆ ಸಂಘದ ಅಧ್ಯಕ್ಷ ದೀಪಕ್ ಉಪಸ್ಥಿತರಿದ್ದರು. ಅನಘಾ ಎಂ.ಜಿ. ಕಾರ್ಯಕ್ರಮ ನಿರೂಪಿಸಿದರು.