*ಗೋಣಿಕೊಪ್ಪ, ಸೆ. ೯: ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಪರಿಸರ ಸ್ನೇಹಿ ಗಣೇಶೋತ್ಸವದ ಬಗ್ಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ತಯಾರಿಸಿದ ಅರಿಶಿಣ ಗಣಪತಿ ಮೂರ್ತಿಗಳನ್ನು ಶಾಲೆಯಲ್ಲಿ ಬುಧವಾರ ಪ್ರದರ್ಶನ ಮಾಡಲಾಯಿತು. ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ರಾಸಾಯನಿಕ ಬಣ್ಣಗಳಿಂದ ಮಾಡಿದ ಗಣಪತಿ ವಿಗ್ರಹದಿಂದ ಆಗುವ ಪರಿಸರ ಮಾಲಿನ್ಯದ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕ ಸತೀಶ ಮಾಹಿತಿ ನೀಡಿದರು. ಶಿಕ್ಷಕರಾದ ಚನ್ನವೀರ ಶೆಟ್ಟಿ ಎಸ್.ಡಿ.ಎಂ.ಸಿ. ಅಧ್ಯಕ್ಷೆ ರೂಪಾ, ವೈದ್ಯೆ ಡಾ. ಅರ್ಚನಾ, ಅಂಗನವಾಡಿ ಸಿಬ್ಬಂದಿಗಳು ಭಾಗವಹಿಸಿದ್ದರು.