ಮಡಿಕೇರಿ, ಸೆ. ೧೧: ಕುಶಾಲನಗರ ೨೨೦ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗಿರುವುದರಿಂದ ತಾ. ೧೨ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ೨೨೦ ಕೆ.ವಿ. ಕುಶಾಲನಗರ, ೩೩/೧೧ ಕೆ.ವಿ.ಸೋಮವಾರಪೇಟೆ, ೬೬/೧೧ ಕೆ.ವಿ. ಸುಂಟಿಕೊಪ್ಪ ಹಾಗೂ ೬೬/೧೧ ಕೆ.ವಿ. ಮಡಿಕೇರಿ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು, ಮಡಿಕೇರಿ ಪಟ್ಟಣ, ಬೋಯಿಕೇರಿ, ಗಾಳಿಬೀಡು, ಕುಂಡಾಮೇಸ್ತಿç, ಮೇಕೇರಿ, ಕಡಗದಾಳು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.