ಕೂಡಿಗೆ, ಸೆ. ೧೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಮಾಬಂದಿ ಕಾರ್ಯಕ್ರಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಮಾತನಾಡಿ, ಜಮಾಬಂದಿ ಕುರಿತು ಮಾಹಿತಿ ನೀಡಿದರು. ಗ್ರಾಮಸ್ಥರಾದ ಹುದುಗೂರು ಗಣೇಶ್ ಮತ್ತು ಮಲ್ಲೇನಹಳ್ಳಿ ಶಿವಣ್ಣ ಕಾಮಗಾರಿಗಳ ಸಮಗ್ರವಾದ ವಿವರವನ್ನು ಆಯಾ ವಾರ್ಡ್ಗೆ ಅನುಗುಣವಾಗಿ ಪಟ್ಟಿ ಮಾಡಿ ಅದರ ಪ್ರತಿಗಳನ್ನು ಸಭೆsÀಗೆ ಬಂದ ಗ್ರಾಮಸ್ಥರಿಗೆ ನೀಡುವಂತೆ ಅಗ್ರಹಿಸಿದ್ದರಿಂದ ಅದರ ಪ್ರತಿಗಳನ್ನು ಮುದ್ರಿಸಿ ವಿತರಣೆ ಮಾಡಲಾಯಿತು.

೨೦೨೦-೨೧ನೇ ಸಾಲಿನ ಲೆಕ್ಕಪತ್ರ ಮತ್ತು ೧೪ನೇ ಹಣಕಾಸು ಯೋಜನೆ ಅಡಿಯಲ್ಲಿ ಕೈಗೊಂಡ ಕಾಮಗಾರಿಗಳ ವಿವರಗಳನ್ನು ಮತ್ತು ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ವಿವರಗಳನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಡಿಸಿದರು.

ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿದ್ದ ಕೂಡುಮಂಗಳೂರು ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರೇಮಕುಮಾರ್ ಮಾತನಾಡಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಇಂಜಿನಿಯರ್ ಕೀರ್ತನ್, ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಪಿ. ಹಮೀದ್ ಅರುಣ್ ರಾವ್ ಜಯಶ್ರೀ ಸೇರಿದಂತೆ ಹುದುಗೂರು ಸೀಗೆಹೊಸೂರು ಮಲ್ಲೇನಹಳ್ಳಿ ಕೂಡಿಗೆ ಮದಲಾಪುರ ವ್ಯಾಪ್ತಿಯ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.