ಚೆಟ್ಟಳ್ಳಿ, ಸೆ. ೧೧: ವೀರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವೀರಾಜಪೇಟೆ ಪಟ್ಟಣ, ಗ್ರಾಮಾಂತರ, ಗೋಣಿಕೊಪ್ಪ, ಪೊನ್ನಂಪೇಟೆ, ಶ್ರೀಮಂಗಲ ಹಾಗೂ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಹಳ್ಳಿಗಳಿಗೆ ಭೇಟಿ ನೀಡಿ ಮಾದಕ ವಸ್ತುಗಳ ದುಷ್ಪರಿಣಾಮಗಳು, ಮಹಿಳಾ ಸುರಕ್ಷತೆ, ಮಕ್ಕಳ ಹಕ್ಕುಗಳು, ೧೧೨ ತುರ್ತು ವಾಹನಗಳ ಉಪಯೋಗ ಇತ್ಯಾದಿಗಳ ಕುರಿತು ಜಾಗೃತಿ ಮೂಡಿಸಿದರು.