ಮಡಿಕೇರಿ, ಸೆ. ೧೬: ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ, ಕಿರುಸಾಲ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಅರ್ಹ ಮಹಿಳೆಯರು ಮತ್ತು ಸ್ತಿçÃಶಕ್ತಿ ಗುಂಪುಗಳಿಗೆ ಬ್ಯಾಂಕ್ ಸಾಲ ಹಾಗೂ ನಿಗಮದ ಸಹಾಯಧನದೊಂದಿಗೆ ಸೌಲಭ್ಯ ನೀಡಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ, ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ, ಇತ್ಯಾದಿಗಳಿಗೆ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ೧೮ ರಿಂದ ೫೫ ವರ್ಷ ವಯೋಮಿತಿಗೊಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿರುತ್ತದೆ.

೧೮ ರಿಂದ ೫೫ ವರ್ಷದೊಳಗಿನ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ/ ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ.೧ ಲಕ್ಷದಿಂದ ರೂ.೩ ಲಕ್ಷದವರೆಗೆ ಹಾಗೂ ಶೇ.೫೦ ಸಹಾಯಧನ ನೀಡಲಾಗುವುದು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.೨ ಲಕ್ಷಕ್ಕೆ ಮೀರಬಾರದು. ಜಾತಿ ಪ್ರಮಾಣ ಪತ್ರ, ಆದಾಯ ದೃಡೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿ.ಪಿ.ಎಲ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಪೋಟೋ ನ್ನು ಒದಗಿಸಬೇಕು.

ಕಿರುಸಾಲ ಯೋಜನೆಯಡಿ ಸ್ತಿçÃಶಕ್ತಿ ಸ್ವ-ಸಹಾಯ ಗುಂಪಿನ (ಇತರೆ ವರ್ಗ) ಸದಸ್ಯರುಗಳಿಗೆ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರತಿ ಗುಂಪಿಗೆ ರೂ. ೨ ಲಕ್ಷಗಳನ್ನು ಬಡ್ಡಿ ರಹಿತ ಸಾಲವನ್ನಾಗಿ ನೀಡಲಾಗುವುದು.

ಕಿರುಸಾಲ ಪಡೆಯುವ ಸ್ತಿçÃಶಕ್ತಿ ಗುಂಪಿಗೆ ಇರುವ ಅರ್ಹತೆಗಳು: ಬ್ಯಾಂಕ್ ಖಾತೆಯನ್ನು ಹೊಂದಿದ್ದು ಚಾಲ್ತಿಯಲ್ಲಿರಬೇಕು. ಗುಂಪು ಅರ್ಥಿಕವಾಗಿ ಸದೃಢವಾಗಿದ್ದು, ಗುಂಪಿನ ಉಳಿತಾಯ ಗರಿಷ್ಟ ೨ ಲಕ್ಷಗಳಿಗೆ ಮೇಲ್ಪಟ್ಟಿರಬೇಕು. ಗುಂಪು ಒಂದು ಯೋಜನಾ ಘಟಕವನ್ನು ಸ್ಥಾಪಿಸಲು ಯೋಜನಾ ವರದಿಯನ್ನು ಹೊಂದಿರಬೇಕು. ತಾಲೂಕು ಮಟ್ಟದ ಸ್ತಿçÃಶಕ್ತಿ ಒಕ್ಕೂಟದಲ್ಲಿ ನೋಂದಾವಣೆಯಾಗಿದ್ದು ರೂ.೨೫೦ ಶುಲ್ಕ ಪಾವತಿಸಿ ಸದಸ್ಯತ್ವ ಹೊಂದಿರಬೇಕು. ಸದಸ್ಯರೆಲ್ಲರೂ ರೂ.೫೦ ಛಾಪಾ ಕಾಗದದಲ್ಲಿ ಕರಾರು ಪತ್ರ, ಸ್ತಿçÃಶಕ್ತಿ ಗುಂಪು ಗ್ರೇಡೀಂಗ್‌ಗೆ ಒಳಪಟ್ಟಿರಬೇಕು.

ಚೇತನಾ ಯೋಜನೆ: ೨೦೨೧-೨೨ ನೇ ಸಾಲಿನಲ್ಲಿ ಚೇತನಾ ಯೋಜನೆಯಡಿ ಲೈಂಗಿಕ ವೃತ್ತಿ ನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ ಹಾಗೂ ಸಮಾಜದಲ್ಲಿ ಗೌರವಯುತ ಜೀವನವನ್ನು ನಡೆಸಿ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಿಗಮವು ಪ್ರತಿ ಫಲಾನುಭವಿಗೆ ರೂ.೩೦ ಸಾವಿರಗಳ ಪ್ರೋತ್ಸಾಹಧನವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಆರ್.ಟಿ.ಜಿ.ಎಸ್ ಮೂಲಕ ಜಮೆ ಮಾಡಲಾಗುವುದು. ಫಲಾನುಭವಿಯು ಸಂಬAಧಪಟ್ಟ ದಾಖಲೆಗಳೊಂದಿಗೆ ರೂ.೫೦ ಛಾಪಾ ಕಾಗದವನ್ನು ಲಗತ್ತಿಸಿ ಈ ಕಚೇರಿಗೆ ಸಲ್ಲಿಸುವುದು. ಆಸಕ್ತರು ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಚುನಾವಣಾ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್, ಅರ್ಜಿದಾರರು ಮತ್ತು ನಿಗಮದೊಂದಿಗೆ ಸಾಲದ ಕುರಿತಾಗಿ ಮಾಡಿಕೊಳ್ಳುವ ಒಪ್ಪಂದ ಪತ್ರ, ಫಲಾನುಭವಿ ಸುಸ್ತಿದಾರಾಗಿರುವುದಿಲ್ಲ ಎಂದು ಸ್ವಯಂ ದೃಢೀಕರಣ ಇರುವ ರೂ. ೫೦ ಛಾಪಾ ಕಾಗದ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, ೨ ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಮತ್ತು ವ್ಯಾಪಾರ ಮಾಡುತ್ತಿರುವ ಫೋಟೋ ೨, ಬ್ಯಾಂಕ್‌ನಲ್ಲಿ ಯಾವುದೇ ಸಾಲವನ್ನು ಹೊಂದಿಲ್ಲವೆAದು ನಿರಾಕ್ಷೇಪಣ ದೃಢೀಕರಣ ಪತ್ರ (ಎನ್‌ಒಸಿ).

ಧನಶ್ರೀ ಯೋಜನೆ: ೨೦೨೧-೨೨ ನೇ ಸಾಲಿನಲ್ಲಿ ಧನಶ್ರೀ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ೧೮-೬೦ ವಯೋಮಿತಿಯ ಎಚ್.ಐ.ವಿ. ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಂಡು ಅಭಿವೃದ್ಧಿ ಹೊಂದಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪ್ರತಿ ಫಲಾನುಭವಿಗೆ ರೂ.೩೦ ಸಾವಿರಗಳ ಸಹಾಯಧನವನ್ನು ನೀಡಲಾಗುವುದು. ಸಂಬAಧಪಟ್ಟ ದಾಖಲೆಗಳೊಂದಿಗೆ ರೂ.೫೦ ಛಾಪಾ ಕಾಗದವನ್ನು ಲಗತ್ತಿಸಿ ಈ ಕಚೇರಿಗೆ ಸಲ್ಲಿಸುವುದು.

ಚುನಾವಣಾ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್, ಅರ್ಜಿದಾರರು ಎಚ್.ಐ.ವಿ ಸೋಂಕಿತರೆAದು ಆರೋಗ್ಯ ಕೇಂದ್ರದಲ್ಲಿ ಮತ್ತು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಪಡೆದ ವೈದೈಕೀಯ ದೃಢೀಕರಣ ಪತ್ರ. ಅರ್ಜಿದಾರರು ಮತ್ತು ನಿಗಮದೊಂದಿಗೆ ಸಾಲದ ಕುರಿತಾಗಿ ಮಾಡಿಕೊಳ್ಳುವ ಒಪ್ಪಂದ ಪತ್ರ ಫಲಾನುಭವಿ ಸುಸ್ತಿದಾರರಾಗಿರುವುದಿಲ್ಲ ಎಂದು ಸ್ವಯಂ ದೃಢೀಕರಣ ಇರುವ ರೂ.೫೦ ಛಾಪಾ ಕಾಗದ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, ೨ ಪಾಸ್ ಪೋರ್ಟ ಸ್ಶೆಜ್ ಪೋಟೋ ಮತ್ತು ವ್ಯಾಪಾರ ಮಾಡುತ್ತಿರುವ ಪೋಟೋ, ಬ್ಯಾಂಕ್‌ನಲ್ಲಿ ಯಾವುದೇ ಸಾಲವನ್ನು ಹೊಂದಿಲ್ಲವೆAದು ನಿರಾಕ್ಷೇಪಣ ದೃಢೀಕರಣ ಪತ್ರ (ಎನ್‌ಒಸಿ) ಈ ದಾಖಲೆಗಳನ್ನು ಸಲ್ಲಿಸಬೇಕು.

೨೦೨೧-೨೨ ನೇ ಸಾಲಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸ್ವ-ಉದ್ಯೋಗ ಕೈಗೊಂಡು ಗೌರವಯುತ ಜೀವನವನ್ನು ನಡೆಸಲು ಹಾಗೂ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಿಗಮವು ರೂ.೩೦,೦೦೦ ಗಳ ಸಹಾಯಧನವನ್ನು ನೀಡಲಾಗುವುದು. ಸಂಬAಧಪಟ್ಟ ದಾಖಲೆಗಳೊಂದಿಗೆ ಲಿಂಗತ್ವ ಅಲ್ಪಸಂಖ್ಯಾತರ ದೃಢೀಕರಣ ಪತ್ರ ಹಾಗೂ ರೂ.೫೦ ಛಾಪಾ ಕಾಗದವನ್ನು ಲಗತ್ತಿಸಿ ಈ ಕಚೇರಿಗೆ ಸಲ್ಲಿಸುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಬಹುದಾಗಿದೆ.

ಸಲ್ಲಿಸಬೆಕಾದ ದಾಖಲೆಗಳು: ಚುನಾವಣಾ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್, ಅರ್ಜಿದಾರರು ಮತ್ತು ನಿಗಮದೊಂದಿಗೆ ಸಾಲದ ಕುರಿತಾಗಿ ಮಾಡಿಕೊಳ್ಳುವ ಒಪ್ಪಂದ ಪತ್ರ, ಫಲಾನುಭವಿ ಸುಸ್ತಿದಾರಾಗಿರುವುದಿಲ್ಲ ಎಂದು ಸ್ವಯಂ ದೃಢೀಕರಣ ಇರುವ ರೂ.೫೦ ಛಾಪಾ ಕಾಗದ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ, ೨ ಪಾಸ್ ಪೋರ್ಟ ಸೈಜ್ ಭಾವಚಿತ್ರ ಮತ್ತು ವ್ಯಾಪಾರ ಮಾಡುತ್ತಿರುವ ಪೋಟೋ, ಬ್ಯಾಂಕ್‌ನಲ್ಲಿ ಯಾವುದೇ ಸಾಲವನ್ನು ಹೊಂದಿಲ್ಲವೆAದು ನಿರಾಕ್ಷೇಪಣ ದೃಢೀಕರಣ ಪತ್ರ (ಎನ್‌ಒಸಿ).

ಧನಶ್ರೀ, ಚೇತನಾ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯ ಅರ್ಜಿಗಳು ಜಿಲ್ಲಾ ಕಚೇರಿ ಮಡಿಕೇರಿಯಲ್ಲಿ ಲಭ್ಯವಿದ್ದು ಅರ್ಹ ಮಹಿಳೆಯರು ಈ ಕಚೇರಿಗಳಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ತಾ. ೨೦ ರೊಳಗೆ ಸಲ್ಲಿಸಬಹುದು. ಅದರಂತೆ ಉದ್ಯೋಗಿನಿ ಯೋಜನೆ ಮತ್ತು ಕಿರುಸಾಲ ಯೋಜನೆಯ ಅರ್ಜಿಗಳು ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿದ್ದು ಅರ್ಹ ಮಹಿಳೆಯರು ಈ ಕಚೇರಿಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು.

ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ ಮಹಿಳೆಯರು ಜಿಲ್ಲಾ ಕಚೇರಿ, ಜಿಲ್ಲಾ ವ್ಯವಸ್ಥಾಪಕರ ಕಚೇರಿ/ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚೈನ್‌ಗೇಟ್, ಮೈಸೂರು ರಸ್ತೆ, ಮಡಿಕೇರಿ, ದೂ. ೯೯೮೦೬೩೨೩೫೨ ನ್ನು ಸಂಪರ್ಕಿಸಬಹುದು.

ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ, ದೂ.ಸಂ-೦೮೨೭೨-೨೨೮೧೯೭. ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತಿçÃಶಕ್ತ್ತಿ ಭವನ, ತಾಲೂಕು ಪಂಚಾಯಿತಿ ಆವರಣ, ಸೋಮವಾರಪೇಟೆ ದೂ. ೦೮೨೭೬-೨೮೨೨೮೧/ ೯೯೦೦೭೬೫೮೨೧. ವೀರಾಜಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯಿತಿ ಆವರಣ, ತೋಟಗಾರಿಕೆ ಇಲಾಖೆ ಹಿಂಭಾಗ, ಪೊನ್ನಂಪೇಟೆ-೫೭೧೨೧೬, ದೂ. ೦೮೨೭೪-೨೪೯೦೧೦ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.