ಮಡಿಕೇರಿ, ಅ. ೮: ಪ್ರಸಕ್ತ ಸಾಲಿಗೆ ಮೂಲನಿವಾಸಿ ಪರಿಶಿಷ್ಟ ಪಂಗಡದವರಾದ ಜೇನುಕುರುಬ ಹಾಗೂ ಕೊರಗ ಸಮುದಾಯದ ವಿದ್ಯಾವಂತ ಯುವಕ, ಯುವತಿಯರಿಗೆ ಶೈಕ್ಷಣಿಕ ಪ್ರೋತ್ಸಾಹಧನ ಮತ್ತು ನಿರುದ್ಯೋಗಿಗಳಿಗೆ ಜೀವನ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. ೩೦ ರಂದು ಕೊನೆ ದಿನವಾಗಿದೆ. ಜೇನು ಕುರುಬ ಮತ್ತು ಕೊರಗ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಗೆ ರೂ.೧೦ ಸಾವಿರ, ಪಿ.ಯು.ಸಿ ಮತ್ತು ತತ್ಸಮಾನ ಕೋರ್ಸ್ಗಳು (ಪ್ರತಿ ವರ್ಷಕ್ಕೆ) ರೂ. ೧೨ ಸಾವಿರ, ಎಲ್ಲಾ ಪದವಿ ಕೋರ್ಸ್ಗಳು (ಪ್ರತಿ ವರ್ಷಕ್ಕೆ) ರೂ. ೧೫ ಸಾವಿರ, ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳು (ಪ್ರತಿ ವರ್ಷಕ್ಕೆ) ರೂ. ೧೮ ಸಾವಿರ ಶೈಕ್ಷಣಿಕ ಪ್ರೋತ್ಸಾಹಧನ ನೀಡಲಾಗುವುದು.

ಅಭ್ಯರ್ಥಿಗಳು ೨೦೨೧-೨೨ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬAಧಿಸಿದ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರ ಲಗತ್ತಿಸುವುದು. ಸಂಬAಧಪಟ್ಟ ಕೋರ್ಸ್ಗಳಲ್ಲಿ ಅಭ್ಯರ್ಥಿಗಳು ವ್ಯಾಸಂಗವನ್ನು ಮುಂದುವರಿಸದೇ ನಿಲ್ಲಿಸಿದ್ದಲ್ಲಿ ಅಂತಹ ಅಭ್ಯರ್ಥಿಗಳ ಶೈಕ್ಷಣಿಕ ಪ್ರೋತ್ಸಾಹಧನವನ್ನು ರದ್ದುಪಡಿಸಲಾಗುವುದು. ಅಭ್ಯರ್ಥಿಗಳು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರ ಸಲ್ಲಿಸಬೇಕು.

ಜೇನು ಕುರುಬ ಮತ್ತು ಕೊರಗ ವಿದ್ಯಾವಂತ ಯುವಕ-ಯುವತಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ರೂ.೨ ಸಾವಿರ, ಪಿಯುಸಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ರೂ.೨೫೦೦, ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳಲ್ಲಿ ತೇರ್ಗಡೆ ಹೊಂದಿದವರಿಗೆ ರೂ.೩೫೦೦, ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳಲ್ಲಿ ತೇರ್ಗಡೆ ಹೊಂದಿದವರಿಗೆ ರೂ. ೪,೫೦೦ ಗಳನ್ನು ಮಾಸಿಕ ನಿರುದ್ಯೋಗಿ ಜೀವನ ಭತ್ಯೆಯನ್ನು ನೀಡಲಾಗುವುದು.

ನಿರುದ್ಯೋಗ ಜೀವನ ಭತ್ಯೆಗೆ ಗರಿಷ್ಠ ವಯೋಮಿತಿ ೪೦ ವರ್ಷದ ಒಳಗಿರತಕ್ಕದ್ದು, ನಿರುದ್ಯೋಗಿಯೆಂದು ನೋಟರಿಯಿಂದ ಅಫಿಡೆವಿಟ್‌ನ್ನು ಪಡೆದು ಬಯೋಡಾಟಾದೊಂದಿಗೆ ಸಲ್ಲಿಸಬೇಕು. ಜೀವನ ಭತ್ಯೆಯನ್ನು ಸರ್ಕಾರ, ಖಾಸಗಿ, ಸ್ವಯಂ ಉದ್ಯೋಗಗಳಡಿ ಉದ್ಯೋಗ ದೊರಕಿದ ಅಥವಾ ಮೂರು ವರ್ಷಗಳ ಅವಧಿಗೆ ಯಾವುದು ಮೊದಲು ಅಲ್ಲಿಯವರೆಗೆ ಮಾತ್ರ ಪಾವತಿಸಲಾಗುವುದು. ಈ ಜೀವನ ಭತ್ಯೆಯನ್ನು ಪಡೆಯುವ ಅಭ್ಯರ್ಥಿಗಳು ಕೌಶಲಾಭಿವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಡ್ಡಾಯವಾಗಿ ತರಬೇತಿ ಪಡೆಯತಕ್ಕದ್ದು. ನಿರುದ್ಯೋಗಿ ಜೀವನ ಭತ್ಯೆ ಮಂಜೂರಾತಿಗೆ ಅಭ್ಯರ್ಥಿಗಳ ವಿವರ, ಶೈಕ್ಷಣಿಕ ವಿದ್ಯಾರ್ಹತೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಫಿಡವಿಟ್, ಬ್ಯಾಂಕ್ ಖಾತೆ ವಿವರದ ದಾಖಲಾತಿಗಳನ್ನು ಸಲ್ಲಿಸುವುದು.

ಅರ್ಜಿಗಳನ್ನು ಪೊನ್ನಂಪೇಟೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ದೂ. ೦೮೨೭೪-೨೬೧೨೬೧, ಮಡಿಕೇರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-೧) ದೂ. ೦೮೨೭೨-೨೨೩೫೫೨, ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-೨) ದೂ. ೦೮೨೭೬-೨೮೧೧೧೫ ಕಚೇರಿಯಿಂದ ಪಡೆಯಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

ಪ್ರೋತ್ಸಾಹಧನಕ್ಕೆ

೨೦೨೧-೨೨ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಇಲಾಖಾ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ. (ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ SಒIS ತಂತ್ರಾAಶದ ಡಿಬಿಟಿ ಮೂಲಕ ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಆದ್ದರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸತಕ್ಕದ್ದು).

ವಿದ್ಯಾರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿAಗ್, ವೈದ್ಯಕೀಯ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‌ನಲ್ಲಿ ಶೇ. ೬೦ ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿಯಲ್ಲಿ ೩ ವರ್ಷ ಪಾಲಿಟೆಕ್ನಿಕ್, ಡಿಪ್ಲೊಮಾ ಕೋರ್ಸ್ಗಳ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಶೇ. ೬೦ ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.

ಅರ್ಜಿ ನಮೂನೆ, ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ ಪ್ರಮಾಣ ಪತ್ರ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. ತಾ. ೩೧ ರ ನಂತರ ಸಲ್ಲಿಸುವ ಅರ್ಜಿ ಸ್ವೀಕರಿಸಲಾಗುವುದಿಲ್ಲ.

ಅರ್ಜಿಯನ್ನು ಮಡಿಕೇರಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ದೂ. ೦೮೨೭೨-೨೨೫೫೩೧, ಮಡಿಕೇರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ. ೦೮೨೭೨-೨೨೩೫೫೨, ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ. ೦೮೨೭೬-೨೮೧೧೧೫, ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ. ೦೮೨೭೪-೨೪೯೪೭೬ ಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್ ತಿಳಿಸಿದ್ದಾರೆ.