ಮಡಿಕೇರಿ, ಅ. ೧೧: ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಸರಕಾರ ಪ್ರತ್ಯೇಕ ಕೊಡವ ಜನಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂಬ ಯುನೈಟೆಡ್ ಕೊಡವ ಆರ್ಗನೈಸೇಷನ್- (ಯುಕೊ) ಒತ್ತಾಯಕ್ಕೆ ಅಖಿಲ ಕೊಡವ ಸಮಾಜ ಬೆಂಬಲ ಸೂಚಿಸಿದೆ.
ವೀರಾಜಪೇಟೆಯ ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಯುಕೊ ಸಂಸ್ಥೆ ಹಮ್ಮಿಕೊಂಡಿರುವ ಕೊಡವ ಜನಾಂಗ ಅಭಿವೃದ್ಧಿ ನಿಗಮ ಹೋರಾಟಕ್ಕೆ ಬೆಂಬಲ ಸೂಚಿಸಲು ನಿರ್ಣಯ ಕೈಗೊಳ್ಳಲಾಯಿತು. ಈ ಕುರಿತು ಸಭೆಗೆ ಮಾಹಿತಿ ನೀಡಿದ ಅಖಿಲ ಕೊಡವ ಸಮಾಜ ಅಧ್ಯಕ್ಷ ಮಾತಂಡ ಮೊಣ್ಣಪ್ಪ ನಾವು ಸರಕಾರಕ್ಕೆ ಪ್ರತ್ಯೇಕವಾಗಿ ಮನವಿ ಸಲ್ಲಿಸುವ ಬದಲು ಈಗಾಗಲೇ ಹೋರಾಟ ಹಮ್ಮಿಕೊಂಡಿರುವ ಯುಕೊ ಸಂಚಾಲಕ ಕೊಕ್ಕಲೇಮಾಡ ಮಂಜು ಚಿಣ್ಣಪ್ಪ ಹಾಗೂ ತಂಡಕ್ಕೆ ಬೆಂಬಲ ಸೂಚಿಸುವ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಅತ್ಯಂತ ಸೂಕ್ಷö್ಮ ಅಲ್ಪಸಂಖ್ಯಾತರಾಗಿರುವ ಕೊಡವ ಜನಾಂಗವೂ ಸಹ ಅಭಿವೃದ್ಧಿ ನಿಗಮ ಹೊಂದಲು ಎಲ್ಲಾ ವಿಧದಲ್ಲಿ ಅರ್ಹತೆಯನ್ನು ಹೊಂದಿದೆ ಹಾಗೂ ಕೊಡವ ಜನಾಂಗ ಕೂಡ ಆರ್ಥಿಕವಾಗಿ ಹಿಂದುಳಿದಿದೆ. ಆದ್ದರಿಂದ ಸರಕಾರ ಕೊಡವರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಕೊಡವ ಜನಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಅಖಿಲ ಕೊಡವ ಸಮಾಜ ನಿರ್ಣಯ ಕೈಗೊಂಡಿತು.
ಹಾಗೇ ಕೊಡವರ ಕೋವಿ ಹಕ್ಕಿನ ವಿಚಾರವಾಗಿ ಗೆಲುವಿಗೆ ಸಹಕಾರಿಯಾದ ಎಲ್ಲಾ ವಕೀಲರಿಗೆ ಸಭೆ ಅಭಿನಂದನೆ ಸಲ್ಲಿಸಿತು ಮಾತ್ರವಲ್ಲ ಸದ್ಯದಲ್ಲಿಯೇ ಎಲ್ಲಾ ವಕೀಲರನ್ನು ಕರೆದು ಸನ್ಮಾನಿಸುವ ತಿರ್ಮಾನ ಕೈಗೊಳ್ಳಲಾಯಿತು. ಹಾಗೇ ಅಖಿಲ ಕೊಡವ ಸಮಾಜ ಮಹಾಸಭೆಯನ್ನು ಡಿಸೆಂಬರ್ ತಿಂಗಳಲ್ಲಿ ನಡೆಸುವಂತೆ ಸಭೆ ತಿರ್ಮಾನಿಸಿತು. ಸಭೆಯಲ್ಲಿ ಅಖಿಲ ಕೊಡವ ಸಮಾಜದ ಅಂಗಸAಸ್ಥೆಯಾಗಿರುವ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಸ್ಥಾಪನೆಯಾಗಿ ಒಂದು ವರ್ಷ ತುಂಬುತ್ತಿರುವ ನಿಟ್ಟಿನಲ್ಲಿ ಯೂತ್ ವಿಂಗ್ ಕಾರ್ಯವೈಖರಿ ಬಗ್ಗೆ ಮಾತಂಡ ಮೊಣ್ಣಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಮಾತಂಡ ಮೊಣ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷ ಅಜ್ಜಿಕುಟ್ಟೀರ ಎನ್ ಮಾದಯ್ಯ, ಪ್ರಧಾನ ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ, ಖಜಾಂಚಿ ಮಂಡೇಪAಡ ಸುಗುಣ ಮುತ್ತಣ್ಣ, ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ, ಪೊನ್ನಂಪೇಟೆ ಕೊಡವ ಸಮಾಜ ಅಧ್ಯಕ್ಷ ಚೊಟ್ಟೇಕ್ಮಾಡ ರಾಜೀವ್ ಬೋಪಯ್ಯ, ವೀರಾಜಪೇಟೆ ಕೊಡವ ಸಮಾಜ ಅಧ್ಯಕ್ಷ ವಾಂಚೀರ ನಾಣಯ್ಯ, ಅಖಿಲ ಕೊಡವ ಸಮಾಜ ಸದಸ್ಯರಾದ ನಂದೇಟೀರ ರಾಜ ಮಾದಪ್ಪ, ಪರದಂಡ ವಿಠಲ್ ಭೀಮಯ್ಯ, ಅಜ್ಜಿಕುಟ್ಟೀರ ದೇವಯ್ಯ, ಕಾಳಿಮಾಡ ಮೋಟಯ್ಯ, ಐನಂಡ ಸಿ ಗಣಪತಿ, ಕೋಲತಂಡ ಸುಬ್ರಮಣಿ, ಬಿ.ಎ ಉತ್ತಯ್ಯ, ಅಪ್ಪಂಡೇರAಡ ಜೋಯಪ್ಪ, ಮುಲ್ಲೇಂಗಡ ಶಂಕರಿ ಪೊನ್ನಪ್ಪ, ಕಾಣತಂಡ ವಿವೇಕ್ ಅಯ್ಯಪ್ಪ, ಅಣ್ಣೀರ ಹರೀಶ್ ಮಾದಪ್ಪ, ಮೊದಲಾದವರು ಉಪಸ್ಥಿತರಿದ್ದರು.