*ಗೋಣಿಕೊಪ್ಪಲು, ಅ. ೧೧: ಕುಶಾಲನಗರ ಬಳಿಯ ಮುಳ್ಳುಸೋಗೆ ಗ್ರಾಮದ ವಿ.ವೆಂಕಟೇಶ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ.ಪದವಿ ಪದವಿ ಲಭಿಸಿದೆ.
ಕೊಡಗು ಜಿಲ್ಲೆಯ ಹಾಡಿಗಳ ಸಾಂಸ್ಕೃತಿಕ ಅಧ್ಯಯನ ಎಂಬ ವಿಷಯದ ಬಗ್ಗೆ ಮಂಗಳಗAಗೋತ್ರಿಯ ಎಸ್.ವಿ.ಪರಮೇಶ್ವರ ಭಟ್ಟ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರೊ.ಹೊಂಗಳ್ಳಿ ಸೋಮಣ್ಣ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೆಂಕಟೇಶ್ ಇದೀಗ ಮಂಗಳೂರಿನ ವಿಶ್ವವಿದ್ಯಾನಿಲಯ ಪದವಿ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.