ನಾಪೋಕ್ಲು, ಅ. ೧೮: ಕಾವೇರಿ ತೀರ್ಥೋದ್ಭವದ ಎರಡನೇ ದಿನ ಇತಿಹಾಸ ಪ್ರಸಿದ್ಧ ಬಲಮುರಿ ಅಗಸ್ತೆö್ಯÃಶ್ವರ ಹಾಗೂ ಕಾವೇರಿ ಕಣ್ವಮುನೀಶ್ವರ ದೇವಾಲಯದಲ್ಲಿ ತುಲಾ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಕಾವೇರಿ ತೀರ್ಥಸ್ನಾನ, ಪಿಂಡ ಪ್ರದಾನ ನಡೆಯಿತು.
ಕಾವೇರಿ ನದಿ ತೀರದ ಎಡಭಾಗದಲ್ಲಿರುವ ಕಾವೇರಿ ಕಣ್ವ ಮುನೀಶ್ವರ ದೇವಾಲಯದಲ್ಲಿ ಬೆಳಿಗ್ಗೆಯಿಂದ ರುದ್ರಾಭಿಷೇಕ, ಮಹಾಪೂಜೆ, ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಮೊದಲು ಕಾವೇರಿ ಕಣ್ವ ಮುನೀಶ್ವರ ದೇವಾಲಯಕ್ಕೆ
(ಮೊದಲ ಪುಟದಿಂದ) ಭೇಟಿ ನೀಡಿ ಹಣ್ಣುಕಾಯಿ ಪೂಜೆ ಸಲ್ಲಿಸಿದ ನಂತರ ಅಗಸ್ತೆö್ಯÃಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಅಗಸ್ತೆö್ಯÃಶ್ವರ ದೇವಾಲಯದಲ್ಲಿ ಅರ್ಚಕ ಚಂದ್ರಶೇಖರ್ ಐತಾಳ್ ಅವರ ನೇತೃತ್ವದಲ್ಲಿ ಬೆಳಿಗ್ಗೆ ೫ ಗಂಟೆಯಿAದ ಧಾರ್ಮಿಕ ಕೈಂಕರ್ಯಗಳು ಆರಂಭಗೊAಡವು. ದೇವರಿಗೆ ಕರ್ಪೂರ ಆರತಿ, ಕುಂಕುಮಾರ್ಚನೆ, ಮಹಾಪೂಜೆ ನಡೆಯಿತು.
ಬಲಮುರಿ, ಮೂರ್ನಾಡು, ಪಾರಾಣೆ, ಬೇತ್ರಿ, ಹೊದ್ದೂರು, ನಾಪೋಕ್ಲು, ಕೊಂಡAಗೇರಿ ಸುತ್ತಮುತ್ತಲು ಗ್ರಾಮಗಳಿಂದ ಭಕ್ತರು ಆಗಮಿಸಿದ್ದರು.
ತುಲಾ ಸಂಕ್ರಮಣದ ಸಂದರ್ಭದಲ್ಲಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಗೆ ತೆರಳಲು ಸಾಧ್ಯವಾಗದ ಭಕ್ತರು ಬಲಮುರಿಗೆ ಬಂದು ಕಾವೇರಿ ತೀರ್ಥಸ್ನಾನ ಮಾಡುವದು ಹಿಂದಿನಿAದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಅದರೊಂದಿಗೆ ಕಾವೇರಿ ನದಿ ತೀರದಲ್ಲಿ ಕೇಶ ಮುಂಡನ, ಪೂರ್ವಿಕರಿಗೆ ಪಿಂಡ ಪ್ರದಾನ ಕಾರ್ಯಗಳು ನಡೆದವು.
ಈ ಸಂದರ್ಭದಲ್ಲಿ ಅಗಸ್ತೆö್ಯÃಶ್ವರ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕೊಂಗೀರAಡ ಸಾಧು ತಮ್ಮಯ್ಯ, ಕಾರ್ಯದರ್ಶಿ ಪೊನ್ನಚ್ಚನ ಜಯ, ಕಾವೇರಿ ಕಣ್ವ ಮುನೀಶ್ವರ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಎಂ. ಉತ್ತಪ್ಪ, ಕಾರ್ಯದರ್ಶಿ ಚೆಯ್ಯಂಡ ಕೆ. ತಿಮ್ಮಯ್ಯ ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಜರಿದ್ದರು. -ಪಿ.ವಿ. ಪ್ರಭಾಕರ್