ಸೋಮವಾರಪೇಟೆ, ಅ. ೨೧: ಮಂಡಲದ ಬಿಜೆಪಿ ಎಸ್.ಸಿ. ಮೋರ್ಚಾದ ವತಿಯಿಂದ ತಾ. ೨೫ರಂದು ಕೊರೊನಾ ವಾರಿರ‍್ಸ್ಗಳನ್ನು ಸನ್ಮಾನಿಸಲಾಗುವುದು ಎಂದು ಮಂಡಲ ಎಸ್.ಸಿ. ಮೋರ್ಚಾ ಅಧ್ಯಕ್ಷ ಎಸ್.ಸಿ. ರಾಮಕೃಷ್ಣ ತಿಳಿಸಿದ್ದಾರೆ. ಗೋಣಿಮರೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದಲ್ಲಿ ಅಂದು ಬೆಳಿಗ್ಗೆ ೧೦.೩೦ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.