ಮಡಿಕೇರಿ, ಅ. ೨೦: ಕೊಡಗು ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಉತ್ತಮ ಹೆಸರುಗಳಿಸಿದ್ದ ಡಾ|| ಸುಮನ್ ಪಣ್ಣೇಕರ್ ಅವರು ಇದೀಗ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ. ಕೊಡಗಿನಿಂದ ವರ್ಗಾವಣೆಗೊಂಡ ಬಳಿಕ ಇವರು ಮೈಸೂರಿನಲ್ಲಿ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕರ್ನಾಟಕ ಸರಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಸುಮನ್ ಅವರು ಮಂಡ್ಯಕ್ಕೆ ವರ್ಗವಾಗಿದ್ದಾರೆ.