ಮಡಿಕೇರಿ, ಅ.೨೨: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಸರ್ಕಾರದ ನಿರ್ದೇಶನದಂತೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅಕ್ಟೋಬರ್, ೨೯ ರಂದು ಬೆಳಗ್ಗೆ ೧೦.೩೦ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯ ಸಭಾಂಗಣದಲ್ಲಿ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.

ಆಸಕ್ತ ವಿದ್ಯಾರ್ಥಿಗಳು, ಸಾರ್ವಜನಿಕರು ಈ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋರಿದೆ. ಭಾಗವಹಿಸಲು ಇಚ್ಛಿಸುವವರು ತಾ. ೨೮ ರೊಳಗೆ ಅಕಾಡೆಮಿಯ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಸ್ಕೌಟ್ಸ್ ಮತ್ತು ಗೈಡ್ಸ್ ಭವನ ಮ್ಯಾನ್ಸ್ ಕಾಂಪೌAಡ್ ಜಿಲ್ಲಾ ಕ್ರೀಡಾಂಗಣದ ಹತ್ತಿರ, ಮಡಿಕೇರಿ ಇಲ್ಲಿ ದೂ.ಸಂ.೦೮೨೭೨-೨೨೫೫೬೬ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಗಿರೀಶ್ ತಿಳಿಸಿದ್ದಾರೆ.