ಮಡಿಕೇರಿ, ಅ. ೨೪: ಕನ್ನಡ ರಾಜ್ಯೋತ್ಸವಕ್ಕೆ ಪೂರಕವಾದ ಕನ್ನಡಕ್ಕಾಗಿ ನಾನು ಆಂದೋಲನ ಸಮರ್ಪಕವಾಗಿ ಅಚ್ಚುಕಟ್ಟಾಗಿ ವ್ಯವಸ್ಥೆಗೊಳಿಸುವ ಬಗ್ಗೆ ನಗರದ ಜಿ.ಪಂ. ಶಾಸಕರ ಕಚೇರಿಯಲ್ಲಿ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು.

ಕೊಡಗು ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆ ನಡೆಯಿತು.

ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ ಮಾತನಾಡಿ, ಸರ್ಕಾರದ ಆದೇಶ ದಂತೆ ಕನ್ನಡ ರಾಜ್ಯೋತ್ಸವಕ್ಕೂ ಮುಂಚಿತವಾಗಿ ತಾ. ೨೪ ರಿಂದ ೩೧ ರವರೆಗೆ ಜಿಲ್ಲೆಯ ವಿವಿದೆಡೆ ಸಾಂಸ್ಕೃತಿಕ ಮಡಿಕೇರಿ, ಅ. ೨೪: ಕನ್ನಡ ರಾಜ್ಯೋತ್ಸವಕ್ಕೆ ಪೂರಕವಾದ ಕನ್ನಡಕ್ಕಾಗಿ ನಾನು ಆಂದೋಲನ ಸಮರ್ಪಕವಾಗಿ ಅಚ್ಚುಕಟ್ಟಾಗಿ ವ್ಯವಸ್ಥೆಗೊಳಿಸುವ ಬಗ್ಗೆ ನಗರದ ಜಿ.ಪಂ. ಶಾಸಕರ ಕಚೇರಿಯಲ್ಲಿ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು.

ಕೊಡಗು ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆ ನಡೆಯಿತು.

ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ ಮಾತನಾಡಿ, ಸರ್ಕಾರದ ಆದೇಶ ದಂತೆ ಕನ್ನಡ ರಾಜ್ಯೋತ್ಸವಕ್ಕೂ ಮುಂಚಿತವಾಗಿ ತಾ. ೨೪ ರಿಂದ ೩೧ ರವರೆಗೆ ಜಿಲ್ಲೆಯ ವಿವಿದೆಡೆ ಸಾಂಸ್ಕೃತಿಕ ಕಾಲ ನಿರರ್ಗಳವಾಗಿ ಅನ್ಯ ಭಾಷೆಯ ಪದಗಳನ್ನು ಬಳಸದೆ ಕೇವಲ ಕನ್ನಡ ಪದಗಳನ್ನೇ ಬಳಸಿ ಮಾತನಾಡುವ ಸ್ಪರ್ಧೆಯನ್ನು ಆಯೋಜಿಸುವುದು. ಯಾವುದಾದರೊಂದು ವಿಷಯದ ಕುರಿತು ಹೀಗೆ ಮಾತನಾಡಿದ ಸ್ಪರ್ಧಿಗಳಿಗೆ ಜಿಲ್ಲಾವಾರು ಮತ್ತು ರಾಜ್ಯ ಮಟ್ಟದಲ್ಲಿ ಪ್ರಮಾಣ ಪತ್ರ ಹಾಗೂ ಬಹುಮಾನ ನೀಡುವಂತೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯ ಎಸ್. ಮಹೇಶ್ ಮಾತನಾಡಿ ಜಿಲ್ಲೆಯ ೫ ತಾಲೂಕಿನ ವ್ಯಾಪ್ತಿಯಲ್ಲೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸು ವಂತೆಯೂ, ಸಮೂಹ ಗಾಯನವನ್ನು ಕೆಲವು ಶಾಲಾ ಕಾಲೇಜುಗಳಲ್ಲಿ ಮಾತ್ರ ಆಯೋಜಿಸದೆ ವಿವಿಧ ಸಂಘ ಸಂಸ್ಥೆಗಳ ಹಾಗೂ ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಏರ್ಪಡಿಸುವಂತೆ ತಿಳಿಸಿದರು.

ಸಮಿತಿಯ ಮತೋರ್ವ ಸದಸ್ಯ ರಂಜಿತಾ ಕಾರ್ಯಪ್ಪ ಮಾತನಾಡಿ ಗಡಿಗ್ರಾಮದಲ್ಲಿ ಕನ್ನಡ ಜಾಗೃತಿಗೊಳಿಸುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ತಿಳಿಸಿದರು.

ಸಮಿತಿ ಸದಸ್ಯರಾದ ಇ. ರಾಜು ಹಾಗೂ ಭಾರತಿ ರಮೇಶ್, ಕಾಜೂರು ಸತೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಉಪಸ್ಥಿತರಿದ್ದರು.