ಮಡಿಕೇರಿ, ಅ. ೩೦: ಕೃಷಿಕರಿಗೆ ಆರ್ಟಿಸಿ ಒದಗಿಸಬೇಕು; ಶಾಲಾ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಸ್ ಸೌಕರ್ಯ ಕಲ್ಪಿಸಬೇಕು; ಸರ್ಕಾರಿ ಕಚೇರಿಗಳ ನಿರ್ಮಾಣಕ್ಕೆ ಜಾಗ ನೀಡಬೇಕು ಎಂಬಿತ್ಯಾದಿ ಒತ್ತಾಯಗಳು ಭಾಗಮಂಡಲ ಗೌಡ ಸಮಾಜದಲ್ಲಿ ನಡೆದ ‘ಜಿಲ್ಲಾಧಿಕಾರಿ ನಡಿಗೆ ಹಳ್ಳಿಯಕಡೆಗೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕೇಳಿ ಬಂದವು.
ಸಭೆಯ ಆರಂಭದಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಸಮ್ಮುಖದಲ್ಲಿ ಮಾತನಾಡಿದ ಭಾಗಮಂಡಲ ಸ್ಥಳೀಯರಾದ ಅಮೆ ಬಾಲಕೃಷ್ಣ ಅವರು ಜಮ್ಮಾ ಬಾಣೆಯಲ್ಲಿ ಕೃಷಿಕರು ಹಲವು ದಶಕಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದಾರೆ. ಅವರವರ ಖಾತೆಗೆ ಆರ್ಟಿಸಿ ಇಲ್ಲದಿರುವುದರಿಂದ ಸಹಕಾರ ಸಂಘಗಳಲ್ಲಿ ಸಾಲ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೃಷಿಕರ ಖಾತೆಗೆ ಆರ್ಟಿಸಿ ಮಾಡಿಸಿಕೊಡುವಂತೆ ಕೋರಿದರು.
ಒಂದು ಕುಟುಂಬದ ಪಟ್ಟೆದಾರರ ಹೆಸರಿನಲ್ಲಿ ಭೂಮಿ ಇದ್ದು, ಮಕ್ಕಳ, ಮೊಮ್ಮಕ್ಕಳ ಹೆಸರಿಗೆ ಆರ್ಟಿಸಿ ಆಗಿರುವುದಿಲ್ಲ. ಇದು ಕೊಡಗಿನ ಸಮಸ್ಯೆಯಾಗಿದ್ದು, ಈ ಬಗ್ಗೆ ಗಮನಹರಿಸಬೇಕಿದೆ ಎಂದು ಮನವಿ ಮಾಡಿದರು. ಏಲಕ್ಕಿ ಬೆಳೆ ಸಂರಕ್ಷಣೆಗೆ ಒತ್ತು ನೀಡಬೇಕಿದೆ. ಈ ಭಾಗದ ಯುವಜನರು ಗುಳೇ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೃಷಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಗ್ರಾ.ಪಂ. ಉಪಾಧ್ಯಕ್ಷರಾದ ಹೊಸೂರು ಸತೀಶ್ಕುಮಾರ್ ಮಾತನಾಡಿ ಕುಟುಂಬದಲ್ಲಿ ಹೊಂದಾಣಿಕೆ ಇಲ್ಲದಿರುವುದರಿಂದ ಕೃಷಿಕರು ಆರ್ಟಿಸಿ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕುಟುಂಬದವರು ಹೊಂದಾಣಿಕೆಯಿAದ ಹೋದರೆ ಆರ್ಟಿಸಿ ಮಾಡಿಸಿಕೊಳ್ಳಬಹುದಾಗಿದೆ. ಆದರೆ ಇದು ಆಗುತ್ತಿಲ್ಲ ಎಂದರು.
ಜಿಲ್ಲೆಯಲ್ಲಿ ಸಹಕಾರ ಸಂಘದಲ್ಲಿ ಶೇ.೩೦ರಷ್ಟು ಮಾತ್ರ ರೈತರು ಕೃಷಿ ಸಾಲ ಪಡೆದುಕೊಂಡಿದ್ದಾರೆ. ಉಳಿದವರು ಆರ್ಟಿಸಿ ಇಲ್ಲದೆ ಕೃಷಿ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು. ನವಗ್ರಾಮ ಯೋಜನೆಯಡಿ ನಿವೇಶನ ಕಾಯ್ದಿರಿಸಿಕೊಡಬೇಕು. ಹಾಗೆಯೇ ಮಳೆಗಾಲದ ಅವಧಿಯಲ್ಲಿ ಭಾಗಮಂಡಲದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತದೆ. ಆದ್ದರಿಂದ ಮೇಲು ಸೇತುವೆ ನಿರ್ಮಾಣ ಮಾಡ ಲಾಗುತ್ತಿದ್ದು, ಮುಂದಿನ ಮಳೆಗಾಲದ ಒಳಗೆ ಕಾಮಗಾರಿ ಪೂರ್ಣಗೊಳಿಸ ಬೇಕು ಎಂದು ಅವರು ಮನವಿ ಮಾಡಿದರು.
ಸ್ಥಳೀಯರಾದ ಸುನಿಲ್ ಪತ್ರಾವೊ ಮಾತನಾಡಿ ಭಾಗಮಂಡಲ ಸುತ್ತಮುತ್ತ ಹಲವು ಬಡ ಕುಟುಂಬಗಳು ಕೃಷಿ ಭೂಮಿ ಇಲ್ಲದೆ ಬಡತನದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದಾರೆ. ಇಂತಹ ನಿರ್ಗತಿಕ ಕುಟುಂಬಗಳಿಗೆ ಭೂಮಿ ಒದಗಿಸು ವಂತಾಗಬೇಕು ಎಂದು ಕೋರಿದರು. ಭಾಗಮಂಡಲ-ತಲಕಾವೇರಿ ಮಾರ್ಗ ದಲ್ಲಿ ಬಸ್ ಸೌಕರ್ಯ ಒದಗಿಸಬೇಕು. ಇದರಿಂದ ವಿದ್ಯಾರ್ಥಿಗಳಿಗೆ, ಭಕ್ತಾಧಿ ಗಳಿಗೆ ಸಾರ್ವಜನಿಕರಿಗೆ ಅನುಕೂಲ ವಾಗಲಿದೆ ಎಂದು ಸುನಿಲ್ ಪತ್ರಾವೊ ಮನವಿ ಮಾಡಿದರು. ಕುದುಕುಳಿ ಜೆ.ಭರತ್ ಮಾತನಾಡಿ ಕೃಷಿಕರಿಗೆ ಭೂಮಿಯ ದಾಖಲೆ ಒದಗಿಸಬೇಕು ಎಂದು ಮನವಿ ಮಾಡಿದರು.
೨೦೧೯ ಮತ್ತು ೨೦೨೦ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದು, ಇವರಿಗೆ ಇದುವರೆಗೆ ಪರಿಹಾರ ದೊರೆತಿಲ್ಲ ಎಂದು ಸಾರ್ವಜನಿಕ ರೊಬ್ಬರು ಅವಲತ್ತುಕೊಂಡರು. ತಲಕಾವೇರಿ ದೇವಾಲಯದ ಅರ್ಚಕ ಕುಟುಂಬದವರಾದ ವಿಠಲ ಆಚಾರ್ಯ ಅವರು ೨೦೨೦ರ ಆಗಸ್ಟ್ನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದು ಕೊಂಡಿದ್ದು, ಒಂದು ವರ್ಷ ಕಳೆದರೂ ಪರಿಹಾರ ದೊರೆತಿಲ್ಲ ಎಂದರು.
ಕೋಡಿ ಪೊನ್ನಪ್ಪ ಮಾತನಾಡಿ ಕರಿಕೆ ವ್ಯಾಪ್ತಿಯಲ್ಲಿ ಆದಿವಾಸಿ ಗಿರಿಜನರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕಿದೆ. ಕರಿಕೆಯಲ್ಲಿರುವ ಸರ್ಕಾರಿ ಶಾಲೆಯ ಭೂಮಿಯ ಸರ್ವೇ ಕಾರ್ಯ ಮಾಡಿ ದಾಖಲೆಯನ್ನು
(ಮೊದಲ ಪುಟದಿಂದ) ಜತನ ಮಾಡಿಕೊಳ್ಳಬೇಕು ಎಂದು ಕೋರಿದರು.
ಹಾಗೆಯೇ ಭಾಗಮಂಡಲ-ಕರಿಕೆ ಮಾರ್ಗ ಬಸ್ ಸಂಪರ್ಕ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಕಾಳನ ರವಿ, ಸುಭಾಷ್ ಇತರರು ಹಲವು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಅಯ್ಯಂಗೇರಿ ಗ್ರಾ.ಪಂ.ಸದಸ್ಯ ಚಂಗಪ್ಪ ಅಯ್ಯಂಗೇರಿ ಗ್ರಾ.ಪಂ.ಕಟ್ಟಡ ನಿರ್ಮಾಣಕ್ಕೆ ಸ್ಥಳಾವಕಾಶ ಗೊಂದ ಲವಿದ್ದು, ಇದನ್ನು ಸರಿಪಡಿಸಬೇಕಿದೆ ಎಂದು ಹೇಳಿದರು. ಕೆಎಸ್ಆರ್ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಗೀತಾ ಅವರು ಭಾಗಮಂಡಲ-ತಲಕಾವೇರಿ, ಭಾಗಮಂಡಲ-ಕರಿಕೆ ಮಾರ್ಗ ಬಸ್ ಸಂಪರ್ಕ ಕಲ್ಪಿಸುವ ಸಂಬAಧ ಅಗತ್ಯ ಕ್ರಮವಹಿಸಲಾಗು ವುದು ಎಂದರು.
ತಹಶೀಲ್ದಾರ್ ಮಹೇಶ್ ಮಾತನಾಡಿ ಪಹಣಿ, ಪೌತಿ ಖಾತೆ, ಸಾಮಾಜಿಕ ಭದ್ರತಾ ಯೋಜನೆಗಳು, ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವುದು, ಸರ್ಕಾರಿ ಭೂಮಿ ಒತ್ತುವರಿಯಾಗಿದ್ದಲ್ಲಿ ತೆರವುಗೊಳಿ ಸುವುದು, ಕೃಷಿಕರಿಗೆ ಹಾಗೂ ಇತರರಿಗೆ ಪ್ರಮಾಣ ಪತ್ರ ಒದಗಿಸುವುದು, ಹೀಗೆ ಹಲವು ಸೌಲಭ್ಯಗಳನ್ನು ಕಲ್ಪಿಸುವ ಸಂಬAಧ ಜಿಲ್ಲಾಧಿಕಾರಿ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಭರವಸೆ
ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಬಳಿಕ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಸರ್ಕಾರ ‘ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ’ ಎಂಬ ಹೆಸರಿನಲ್ಲಿ ಸ್ಥಳೀಯ ಹಲವು ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಸ್ಥಳೀಯ ಹಂತದ ಸಮಸ್ಯೆಗಳನ್ನು ಪರಿಹರಿಸಲು ಹಂತ ಹಂತವಾಗಿ ಪ್ರಯತ್ನಿಸಲಾಗು ವುದು ಎಂದರು. ಭಾಗಮಂಡಲ-ತಲಕಾವೇರಿ ಮತ್ತು ಭಾಗಮಂಡಲ-ಕರಿಕೆ ಮಾರ್ಗದಲ್ಲಿ ಬಸ್ ಸಂಪರ್ಕ ಕಲ್ಪಿಸಲಾಗುವುದು. ಶಾಲಾ ವಿದ್ಯಾರ್ಥಿ ಗಳು, ಭಕ್ತಾಧಿಗಳು, ಸಾರ್ವಜನಿಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗುವುದು. ಮೇಲ್ಸೇತುವೆ ಕಾಮಗಾರಿ ಸಂಬAಧ ಕಾವೇರಿ ನೀರಾವರಿ ನಿಗಮದ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗುವುದು.
ಕೃಷಿಕರಿಗೆ ಆರ್ಟಿಸಿ ಒದಗಿಸು ವಲ್ಲಿ ಗಮನಹರಿಸಲಾಗುವುದು. ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಲಭ್ಯವಿರುವ ಕಡೆ ಜಾಗ ಒದಗಿಸಲಾಗು ವುದು. ಸರ್ಕಾರಿ ಕಚೇರಿಗಳು, ವಸತಿ ನಿರ್ಮಾಣ, ಶೌಚಾಲಯ, ಅಂಗನವಾಡಿ ನಿರ್ಮಾಣ, ಸ್ಮಶಾನಕ್ಕೆ ಭೂಮಿ ಹೀಗೆ ಹಲವು ಉದ್ದೇಶಗಳಿಗೆ ಭೂಮಿ ಒದಗಿಸಲಾಗುವುದು. ಮನೆ ಕಳೆದುಕೊಂಡವರಿಗೆ ಪರಿಹಾರ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಖ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ತಾ.ಪಂ.ಇಒ ಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಸುರೇಶ್ ಭಟ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ, ಸಿಡಿಪಿಒ ಅರುಂಧತಿ, ಗಡಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಐಟಿಡಿಪಿ ಇಲಾಖೆ ಅಧಿಕಾರಿ ಶ್ರೀನಿವಾಸ್, ತಲಕಾವೇರಿ-ಭಾಗಮಂಡಲ ದೇವಾಲಯ ಕಾರ್ಯನಿರ್ವಹಣಾಧಿಕಾರಿ ಬಿ.ಎಂ. ಕೃಷ್ಣಪ್ಪ, ತಾಲೂಕು ವೈದ್ಯಾಧಿಕಾರಿ ಡಾ. ಮಂಜುನಾಥ್, ಗ್ರಾ.ಪಂ. ಅಧ್ಯಕ್ಷರಾದ ಪೆಮಿತ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕÀ ಪುಟ್ಟರಾಜು ಇತರರು ಇದ್ದರು.