ಮಡಿಕೇರಿ, ನ. ೩: ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಕುಟುಂಬಗಳ ನಡುವೆ ಏರ್ಪಡಿಸಲಾಗಿರುವ ‘ಕುಟುಂಬ-೨೦೨೧’ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ತಾ. ೪ ರಿಂದ (ಇಂದಿನಿAದ) ನಡೆಯಲಿದೆ. ತಾ. ೧೨ರ ವರೆಗೆ ನಡೆಯಲಿರುವ ಪಂದ್ಯಾವಳಿಗೆ ಮಳೆಯ ನಡುವೆಯೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಳೆದ ಏಪ್ರಿಲ್ ೨೧ ರಿಂದ ಆರಂಭಗೊAಡು ನಂತರದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಪಂದ್ಯಾವಳಿಯನ್ನು ತಾ. ೪ ರಿಂದ ಪುನರಾರಂಭಿಸಲಾಗುತ್ತಿದೆ.

ಈ ಹಿಂದಿನ ಟೈಸ್ ಪ್ರಕಾರವೇ ಪಂದ್ಯಾವಳಿ ನಡೆಯಲಿದೆ. ಒಟ್ಟು ೯೮ ಕುಟುಂಬ ತಂಡಗಳು ಪಂದ್ಯಾವಳಿಯಲ್ಲಿ ಹೆಸರು ನೋಂದಾಯಿಸಿಕೊAಡಿದ್ದು, ಈಗಾಗಲೇ ಈ ಹಿಂದೆ ನಡೆದ

(ಮೊದಲ ಪುಟದಿಂದ) ಪಂದ್ಯಾವಳಿಯಲ್ಲಿ ಎರಡು ತಂಡಗಳು ಪ್ರಿ-ಕ್ವಾರ್ಟರ್ ಹಂತಕ್ಕೆ ಪ್ರವೇಶ ಪಡೆದಿವೆ.

ಪಂದ್ಯಾವಳಿಗಾಗಿ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ (ಜಿಲ್ಲಾ ಕ್ರೀಡಾಂಗಣ) ಯುವ ವೇದಿಕೆ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಿರಂತರ ಮಳೆಯಿಂದಾಗಿ ಮೈದಾನ ತೇವಗೊಂಡಿದ್ದು, ಇಂದು ಯುವ ವೇದಿಕೆ ಪದಾಧಿಕಾರಿಗಳು, ಸದಸ್ಯರು ಸೇರಿ ಪಿಚ್ ಹಾಗೂ ಮೈದಾನ ಸಿದ್ಧಪಡಿಸಿದರು. ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ, ಕಾರ್ಯದರ್ಶಿ ಕಟ್ಟೆಮನೆ ರೋಶನ್, ಕ್ರೀಡಾ ಸಮಿತಿ ಅಧ್ಯಕ್ಷ ಬಾಳಾಡಿ ಮನೋಜ್, ಆಹಾರ ಸಮಿತಿ ಅಧ್ಯಕ್ಷ ಪರಿಚನ ಸತೀಶ್, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಕ್ಕೇರ ಲಕ್ಷö್ಮಣ, ಗೌರವ ಸಲಹೆಗಾರ ಯಾಲದಾಳು ಹರೀಶ್, ನಿರ್ದೇಶಕರುಗಳು ಪಾಲ್ಗೊಂಡಿದ್ದರು.