ಸಿದ್ದಾಪುರ, ನ. ೭: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ನಡೆದಿದೆ. ಗುಹ್ಯ ಗ್ರಾಮದ ಕೂಡುಗದ್ದೆ ನಿವಾಸಿ ದಿ. ಮಣಿ ಎಂಬವರ ಪುತ್ರ ಹರಿಹರ (೩೨) ಎಂಬಾತ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಶನಿವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಸುಂಟಿಕೊಪ್ಪದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕ ರಾಗಿದ್ದರು. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸ ಲಾಯಿತು.