ಮಡಿಕೇರಿ, ನ. ೭ : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ೨೦೨೧-೨೨ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ “ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ” ಯಡಿ ಸರ್ಕಾರಿ/ ಖಾಸಗಿ ಅನುದಾನಿತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಇಲಾಖೆ ವೆಬ್ ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಸಂಬAಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಪಡೆದುಕೊಳ್ಳುವುದು. ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ತಾ. ೩೦ ರೊಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿ, ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿಗೆ ಸಲ್ಲಿಸುವುದು.

ಯಾವುದೇ ಇಲಾಖೆಯ ಸರ್ಕಾರಿ/ ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯ/ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮಾತ್ರ