ಮಡಿಕೇರಿ, ನ. ೧೧: ಹಿರಿಯ ನಾಗರಿಕರ ಸಹಾಯವಾಣಿ (ಎನ್‌ಐಎಸ್ಸಿ) ಎಲ್ಲರ್‌ಲೈಸ್, ಟೋಲ್ ಫ್ರೀ ಸಂಖ್ಯೆ ೧೪೫೬೭ ಅಗತ್ಯ ಮಾಹಿತಿ ಮತ್ತು ಉತ್ತಮ ಕ್ಷೇತ್ರ ಕಾರ್ಯದ ಮೂಲಕ ಭಾರತದಲ್ಲಿ ಹಿರಿಯ ನಾಗರಿಕರ ಕುಂದುಕೊರತೆ ಪರಿಹರಿಸುವ ಒಂದು ಸಾರ್ವಜನಿಕ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ.

ಇದು ರಾಜ್ಯ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ರೂಪುಗೊಳಿಸಿರುವ ಒಂದು ಮಹತ್ವಪೂರ್ಣ ಯೋಜನೆಯಾಗಿದೆ. ಭಾರತದ ಪ್ರತಿಯೊಂದು ರಾಜ್ಯದಲ್ಲಿ ರಾಷ್ಟಿçÃಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು ಹೊಂದಿದ್ದು, ಕರ್ನಾಟಕದಲ್ಲಿ ಇದನ್ನು ಕರ್ನಾಟಕ ಸರ್ಕಾರದ ವಿಶೇಷಚೇತನರು ಈಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ ೧೯೯೮ ರಿಂದ ಹಿರಿಯ ನಾಗರಿಕರ ಯೋಗಕ್ಷೇಮಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆ ನೈಟಿಂಗೇಲ್, ಮೆಡಿಕಲ್ ಟ್ರಸ್ಟ್ ಕರ್ನಾಟಕದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಪಾಲುದಾರರಾಗಿ ನಾಮನಿರ್ದೇಶನಗೊಂಡಿದೆ. ಪ್ರಸ್ತುತ ೧೪೫೬೭ ಹಿರಿಯ ನಾಗರಿಕರ ಸಹಾಯವಾಣಿ ಸಂಪರ್ಕ ಕೇಂದ್ರ, ಬೆಂಗಳೂರಿನಲ್ಲಿ ಸ್ಥಾಪಿತವಾಗಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಷೇತ್ರ ಕಾರ್ಯನಿರ್ವಹಣಾ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

೧೪೫೬೭ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವ ಹಿರಿಯ ನಾಗರಿಕರಿಗೆ ಕೋವಿಡ್ ಸಂಬAಧಿತ ವಿಷಯಗಳ ಕುರಿತು ಮಾಹಿತಿ, ಆಸ್ಪತ್ರೆಗಳ ಬಗ್ಗೆ, ವೃದ್ಧಾಶ್ರಮಗಳ ಬಗ್ಗೆ, ಆರೈಕೆ ಕೇಂದ್ರಗಳು, ಹಗಲು ಯೋಗಕ್ಷೇಮ ಕೇಂದ್ರಗಳು, ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಇರುವ ಸರ್ಕಾರಿ ಸೌಲಭ್ಯಗಳ ಬಗ್ಗೆ, ಪಿಂಚಣಿ ಯೋಜನೆಯ ಬಗ್ಗೆ ಮಾರ್ಗದರ್ಶನ ನೀಡುವುದಲ್ಲದೇ ಹಿರಿಯ ನಾಗರಿಕರ ಪಾಲನೆ ಪೋಷಣೆ ಕಾಯಿದೆ ಬಗ್ಗೆ ಮತ್ತು ಕಾನೂನಾತ್ಮಕ ಸಮಸ್ಯೆಗಳ ಬಗ್ಗೆಯ ಮಾರ್ಗದರ್ಶನ ನೀಡಲಾಗುವುದು, ಭಾವನಾತ್ಮಕ ಬೆಂಬಲ ಹಾಗೂ ನಿಂದನೆಗೊಳಪಟ್ಟ, ಪರಿತ್ಯಜಿಸಲ್ಪಟ್ಟ ಹಿರಿಯರನ್ನು ರಕ್ಷಿಸುವುದು ಮತ್ತು ಅಂತಹ ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಇತ್ಯರ್ಥಗೊಳಿಸುವರು. ಇಂತಹ ಸೇವೆಗಳನ್ನು ಒದಗಿಸಲಾಗುವುದು ಸಹಾಯವಾಣಿ ಕಾರ್ಯದ ಬಗ್ಗೆ ಉತ್ತಮ ತರಬೇತಿಯನ್ನು ಪಡೆದುಕೊಂಡಿರುವ ಸಿಬ್ಬಂದಿಗಳು ಸಂಪರ್ಕ ಕೇಂದ್ರದ ಅಧಿಕಾರಿಗಳು ಹಾಗೂ ಕ್ಷೇತ್ರ ಕಾರ್ಯ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಿರಿಯ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಮ್ಮ ಎಲ್ಲರ್‌ಲೈನ್ ತಂಡದ ಸಿಬ್ಬಂದಿಗಳು ತಮ್ಮ ಇಲಾಖೆಯೊಂದಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.