ಮಡಿಕೇರಿ, ನ. ೨೩: ಅಕಾಲಿಕ ಮಳೆಯಿಂದ ಉಂಟಾದ ಬೆಳೆಹಾನಿ ಸಂಬAಧಿಸಿದAತೆ ಕಾಫಿ ಮಂಡಳಿ, ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡವು ಕೃಷಿಕರಿಗೆ ಮಾಹಿತಿ ನೀಡಿ, ನಿಖರ ಸಮೀಕ್ಷೆ ಮಾಡಿ, ವರದಿ ನೀಡುವಂತೆ ಜಂಟಿ ಸಮೀಕ್ಷೆ ತಂಡಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸೂಚಿಸಿದ್ದಾರೆ.

ನಗರದ ರಾಷ್ಟಿçÃಯ ಮಾಹಿತಿ ತಂತ್ರಜ್ಞಾನ ಕೇಂದ್ರದಲ್ಲಿ ವೀಡಿಯೋ ಸಂವಾದ ಮೂಲಕ ಮಾಹಿತಿ ಪಡೆದು ಅವರು ಮಾತನಾಡಿದರು.

ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳುವ ಸಂಬAಧ ಬೆಳೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಕೃಷಿಕರಿಗೆ ಮಾಹಿತಿ ನೀಡಬೇಕು. ಸ್ಥಳ ಪರಿಶೀಲಿಸುವ ಸಂದರ್ಭದಲ್ಲಿ

(ಮೊದಲ ಪುಟದಿಂದ) ಪ್ರತಿನಿತ್ಯ ಛಾಯಾಚಿತ್ರ ಸಹಿತ ವರದಿ ನೀಡಬೇಕು. ಕೃಷಿಕರಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಮಾಡದೆ ಬೆಳೆಹಾನಿ ಸಮೀಕ್ಷೆ ಮಾಡಿ ವರದಿ ನೀಡುವಂತೆ ನಿರ್ದೇಶನ ನೀಡಿದರು.

ಬೆಳೆಹಾನಿ ಪೋರ್ಟಲ್‌ನಲ್ಲಿ ನಮೂದು ಮಾಡಬೇಕು. ಕೃಷಿಕರಿಂದ ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ಸಮೀಕ್ಷೆ ಕೈಗೊಂಡು ತಾ. ೩೦ ರೊಳಗೆ ವರದಿ ನೀಡುವಂತೆ ಜಂಟಿ ಸಮೀಕ್ಷೆ ತಂಡಕ್ಕೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಶೇ. ೩೩ ಕ್ಕಿಂತ ಹೆಚ್ಚು ಮಳೆಯಿಂದ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ತೆರಳುವ ಸಂದರ್ಭದಲ್ಲಿ ಕೃಷಿಕರಿಗೆ ಮಾಹಿತಿ ನೀಡುವುದರ ಜೊತೆಗೆ ಕೃಷಿಕರಿಂದ ಅರ್ಜಿ ಪಡೆಯುವಂತೆ ಸಲಹೆ ಮಾಡಿದರು.

ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಅವರು ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿ ಆಗಿರುವ ಪ್ರದೇಶಗಳಿಗೆ ತೆರಳಿ ಸಮೀಕ್ಷೆ ಕೈಗೊಳ್ಳಬೇಕು. ಜಂಟಿ ಸಮೀಕ್ಷೆ ಸಂದರ್ಭದಲ್ಲಿ ಸ್ಥಳ ಪರಿಶೀಲಿಸಲಾಗುವುದು ಎಂದರು.

ತಹಶೀಲ್ದಾರ್ ಗೋವಿಂದರಾಜು ಅವರು ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ, ಸೋಮವಾರಪೇಟೆ ಮತ್ತು ಸುಂಟಿಕೊಪ್ಪ ಭಾಗದಲ್ಲಿ ಶೇ. ೩೩ ಕ್ಕಿಂತ ಹೆಚ್ಚು ಕಾಫಿ, ಕಾಳುಮೆಣಸು ಬೆಳೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು. ಶಾಂತಳ್ಳಿ ಹೋಬಳಿಯ ಅಭಿಮಠ, ಬೆಟ್ಟದಹಳ್ಳಿ, ಚಿಕ್ಕತೋಳೂರು, ದೊಡ್ಡ ತೋಳೂರು, ಹರಗ, ಕೂತಿ, ಕೊತ್ತನಹಳ್ಳಿ, ಕುಮಾರಳ್ಳಿ, ಕುಂದಳ್ಳಿ, ಶಾಂತಳ್ಳಿ, ಟಿ. ಶೆಟ್ಟಳ್ಳಿ, ತೋಳೂರು ಶೆಟ್ಟಳ್ಳಿ, ಹಾಗೆಯೇ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಗರ್ವಾಲೆ, ಮೂವತ್ತೋಕ್ಲು, ಶಿರಂಗಳ್ಳಿ, ಸೂರ್ಲಬ್ಬಿ, ಸೋಮವಾರಪೇಟೆ ಕಸಬಾ ಹೋಬಳಿಯ ಬಿಳಿಗೇರಿ, ಕಿರಗಂದೂರು, ತಾಕೇರಿ, ಹೀಗೆ ಹಲವು ಕಡೆಗಳಲ್ಲಿ ಕಾಫಿ, ಕಾಳು ಮೆಣಸು ಹಾನಿಯಾಗಿದೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ. ಶೇಖ್, ಕಾಫಿ ಮಂಡಳಿ ಉಪ ನಿರ್ದೇಶಕ ಶಿವಕುಮಾರ್ ಸ್ವಾಮಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್ ಇತರರು ಬೆಳೆಹಾನಿ ಸಮೀಕ್ಷೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.