ಕಣಿವೆ, ನ. ೨೬: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕುಶಾಲನಗರ ತಾಲೂಕಿನ ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು, ಮುಳ್ಳುಸೋಗೆ ಮೊದಲಾದ ಕಡೆ ಕಾಂಗ್ರೆಸ್ ಅಭ್ಯರ್ಥಿ ಮಂಥರ್‌ಗೌಡ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಿದರು.

ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರೆಲ್ಲಾ ಒಗ್ಗಟ್ಟಾಗಿದ್ದು ಮಂಥರ್‌ಗೌಡ ಬಹುಮತಗಳಿಂದ ಚುನಾಯಿತರಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹೆಚ್.ಎಸ್. ಚಂದ್ರಮೌಳಿ ಹೇಳಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಚಂದ್ರಮೌಳಿ, ಕೆ.ಪಿ. ಚಂದ್ರಕಲಾ, ಕೆ.ಎಂ. ಲೋಕೇಶ್, ವಿ.ಪಿ. ಶಶಿಧರ್, ಕೆ.ಕೆ. ಮಂಜುನಾಥ ಕುಮಾರ್, ಹೆಚ್.ಎಂ. ನಂದಕುಮಾರ್, ಬಿ.ಎಸ್. ಚಂದ್ರಶೇಖರ್, ಪ್ರಥ್ಯು, ಅನಂತ ಕುಮಾರ್, ಷರೀಫ್ ಮೊದಲಾದವರಿದ್ದರು.