ಸೋಮವಾರಪೇಟೆ, ನ. ೨೭: ಸಮೀಪದ ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಿರಿಕರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯಿತು. ವೈದ್ಯಾಧಿಕಾರಿ ಇಂದೂಧರ್ ಶಿಬಿರ ಉದ್ಘಾಟಿಸಿದರು. ಗ್ರಾಮ ನಿವಾಸಿಗಳು ಲಸಿಕೆ ಹಾಕಿಸಿಕೊಂಡರು. ಗೌಡಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಈ. ವೆಂಕಟೇಶ್, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ದಿನೇಶ್, ಆಶಾ ಕಾರ್ಯಕರ್ತೆ ಹೆಚ್.ಕೆ. ಪ್ರೇಮಾ, ಆರೋಗ್ಯ ಕಾರ್ಯಕರ್ತೆ ಶ್ವೇತ, ಅಂಗನವಾಡಿ ಕಾರ್ಯಕರ್ತೆ ಹೇಮಲತಾ ಉಪಸ್ಥಿತರಿದ್ದರು.