ಕುಶಾಲನಗರ, ಡಿ. ೨: ಕುಶಾಲನಗರ ಸಮೀಪ ಕೊಪ್ಪ ಗ್ರಾಮ ವ್ಯಾಪ್ತಿಯ ರಾಣಿ ಗೇಟ್ ಬಳಿ ಕೂಲಿ ಕಾರ್ಮಿಕನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಗುಂಡುಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ನಾಲ್ವರ ಮೇಲೆ ದೂರು ದಾಖಲಾಗಿದೆ. ಗುಂಡು ತಾಗಿ ತೀವ್ರ ಗಾಯಗೊಂಡ ರಾಣಿ ಗೇಟ್ ಹಾಡಿಯ ನಿವಾಸಿ ಬಸವ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬAಧಿಸಿದAತೆ ಅರಣ್ಯ ಇಲಾಖೆಯ ವನಪಾಲಕ ಮಂಜುನಾಥ ಸೇರಿದಂತೆ ನಾಲ್ವರ ಮೇಲೆ ದೂರು ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ಬೈಲುಕೊಪ್ಪ ಪೊಲೀಸ್ ಠಾಣಾಧಿಕಾರಿ ಪುಟ್ಟರಾಜು ತಿಳಿಸಿದ್ದಾರೆ.