ಮಡಿಕೇರಿ, ಡಿ. ೨: ನಗರದ ಕೊಡವ ಸಮಾಜದ ವಾರ್ಷಿಕ ಮಹಾಸಭೆ ತಾ. ೫ರಂದು ಬೆಳಿಗ್ಗೆ ೧೦.೩೦ ಗಂಟೆಗೆ, ಅಧ್ಯಕ್ಷ ಕೊಂಗಾAಡ ಎಸ್. ದೇವಯ್ಯ ಅಧ್ಯಕ್ಷತೆಯಲ್ಲಿ ಕೊಡವ ಸಮಾಜದಲ್ಲಿ ನಡೆಯಲಿದೆ.

ಮಹಾಸಭೆಯ ನಂತರ ಅಪರಾಹ್ನ ೧೨ ಗಂಟೆಗೆ ಕೊಡವ ಸಮಾಜದ ‘ಪುತ್ತರಿ ಊರೋರ್ಮೆ’ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಮಾಜಿ ಮಂತ್ರಿ ಮೇರಿಯಂಡ ಸಿ.ನಾಣಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶಿಕ್ಷಣ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಿದ್ದಾರೆ.

ಮಧ್ಯಾಹ್ನ ೨.೩೦ ಗಂಟೆಗೆ ‘ಪುತ್ತರಿ ಊರೋರ್ಮೆ’ ಪ್ರಯುಕ್ತ ಮಡಿಕೇರಿಯ ಕೊಡವ ಸಮಾಜದ ಕೋಲ್ ಮಂದ್‌ನಲ್ಲಿ ಪುತ್ತರಿ ಕೋಲಾಟ್, ಬೊಳಕಾಟ್, ಉಮ್ಮತ್ತಾಟ್, ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.