ಸೋಮವಾರಪೇಟೆ, ಡಿ. ೫: ಅಬ್ಬೂರುಕಟ್ಟೆಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ತಾ. ೬ ರಂದು (ಇಂದು) ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಸಂಘದ ಸಂಚಾಲಕ ತಿಮ್ಮಯ್ಯ ತಿಳಿಸಿದ್ದಾರೆ.

ಅಬ್ಬೂರುಕಟ್ಟೆಯಲ್ಲಿರುವ ನೇರುಗಳಲೆ ಗ್ರಾ.ಪಂ. ಸಮುದಾಯ ಭವನದಲ್ಲಿ ಶಿಬಿರ ನಡೆಯಲಿದ್ದು, ತಾ. ೬ರಂದು ಬೆಳಿಗ್ಗೆ ೧೦ ಗಂಟೆಯಿAದ ಅಪರಾಹ್ನ ೩ ಗಂಟೆಯವರೆಗೆ ರಕ್ತದಾನ ನಡೆಯಲಿದೆ. ಇದರೊಂದಿಗೆ ಸಾರ್ವಜನಿಕರಿಗೆ ಉಚಿತವಾಗಿ ರಕ್ತದೊತ್ತಡ ಹಾಗೂ ಮಧುಮೇಹ ರೋಗ ತಪಾಸಣೆ ನಡೆಸಲಾಗುವುದು ಎಂದು ತಿಮ್ಮಯ್ಯ ತಿಳಿಸಿದ್ದಾರೆ.