ನಾಪೋಕ್ಲು, ಡಿ. ೫: ಅನಧಿಕೃತವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಪಿಕ್ಅಪ್ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.
ಮಡಿಕೇರಿ ಗ್ರಾಮಾಂತರ ಠಾಣಾ ವೃತ್ತನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ನಾಪೋಕ್ಲು ಠಾಣಾಧಿಕಾರಿ ಆರ್.ಕಿರಣ್ ಮತ್ತು ತಂಡ ವಾಹನವನ್ನು ತಪಾಸಣೆ ನಡೆಸುವ ಸಂದರ್ಭ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದು, ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
(ಮೊದಲ ಪುಟದಿಂದ) ಈ ಸಂದರ್ಭದಲ್ಲಿ ಹೆಡ್ಕಾನ್ಸ್ಟೇಬಲ್ ರವಿಕುಮಾರ್, ಸಿಬ್ಬಂದಿಗಳಾದ ನವೀನ್, ಶರತ್ಕುಮಾರ್, ಶಿವಪ್ರಸಾದ್, ರಾಜೇಶ್ ಹಾಗೂ ಚಾಲಕ ಶರೀಫ್ ಇದ್ದರು.