ಮಡಿಕೇರಿ, ಡಿ. ೨೮: ಸ್ಯಾಂಡಲ್‌ವುಡ್ ಬೆಡಗಿ ದಾವಣಗೆರೆ ಮೂಲದ ಅದಿತಿ ಪ್ರಭುದೇವ ಕೊಡಗಿನ ಸೊಸೆಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದ್ದು, ವಿವಾಹದ ನಿಶ್ಚಿತಾರ್ಥವಾಗಿದೆ.

ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ. ಚಂದ್ರಕಾAತ್ ಹಾಗೂ ಸುಚರಿತ ದಂಪತಿಗಳ ಪುತ್ರ ಯಶಸ್ವಿಯನ್ನು ಅದಿತಿ ವರಿಸಲಿದ್ದಾರೆ. ಯಶಸ್ವಿ ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು, ಕೃಷಿ ಕ್ಷೇತ್ರದ ಕಡೆಗೂ ಒಲವು ಹೊಂದಿದ್ದಾರೆ.

ಮೊದಲಿಗೆ ನಿರೂಪಕಿಯಾಗಿ ತೆರೆ ಮೇಲೆ ಕಾಣಿಸಿಕೊಂಡ ಅದಿತಿ ಬಳಿಕ ‘ಗುಂಡ್ಯಾನ್ ಹೆಂಡ್ತಿ’ ಧಾರವಾಹಿಯ ಮೂಲಕ ಕಿರುತೆರೆ ಪ್ರವೇಶಿಸಿದ್ದರು. ೨೦೧೭ರಲ್ಲಿ ನಟ ಅಜಯ್ ರಾವ್ ಜೊತೆ ‘ಧೈರ್ಯಂ’ ಚಿತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದರು. ಸದ್ಯ ಅನೇಕ ಸಿನಿಮಾ ಆಫರ್‌ಗಳನ್ನು ಕೈಯಲ್ಲಿಟ್ಟುಕೊಂಡು ಕನ್ನಡ ಚಿತ್ರರಂಗದ ಬ್ಯೂಸಿ ನಟಿಯಾಗಿದ್ದಾರೆ.