ವೀರಾಜಪೇಟೆ, ಡಿ. ೨೯: ವೀರಾಜಪೇಟೆ ಕೊಡವ ಸಂಘ ಒಕ್ಕೂಟದ ಉದ್ಘಾಟನಾ ಸಮಾರಂಭ ವೀರಾಜಪೇಟೆ ಕೊಡವ ಸಮಾಜದ ಸ್ಪೋಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಳ್ಳೆರ ಪಿ. ಗಣೇಶ್, ಅಖಿಲ ಕೊಡವ ಸಮಾಜ ಅಧ್ಯಕ್ಷ ಮಾತಂಡ ಸಿ ಮೊಣ್ಣಪ್ಪ, ವೀರಾಜಪೇಟೆ ಕೊಡವ ಸಮಾಜ ಅಧ್ಯಕ್ಷ ವಾಂಚಿರ ನಾಣಯ್ಯ, ಹಿರಿಯ ಸಮಾಜ ಸೇವಕ ನಾಯಡ ವಾಸು ನಂಜಪ್ಪ ಅವರುಗಳು ಪಾಲ್ಗೊಂಡಿದ್ದರು. ಇದೇ ಸಂದÀರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಳ್ಳೆರ ಪಿ. ಗಣೇಶ್ ಅವರುಗಳನ್ನು ಸನ್ಮಾನಿಸಲಾಯಿತು. ಅಧ್ಯಕ್ಷ ಮೇಕೆರಿರ ರವಿ ಪೆಮ್ಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಬಾಚಿರ ಜಗದೀಶ್, ವಿವಿಧ ಕೊಡವ ಕೇರಿಗಳ ಅಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿದ್ದರು.