ಮಡಿಕೇರಿ, ಜ. ೧: ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ಮಗ್ಗುಲ, ಐಮಂಗಲ, ಅಂಬಟ್ಟಿ, ನಲ್ವತ್ತೋಕ್ಲು, ಚೋಕಂಡಳ್ಳಿ, ಬಿಳುಗುಂದ, ಬಿಟ್ಟಂಗಾಲ, ಕೊಳತ್ತೋಡು- ಬೈಗೋಡು ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ತಾ. ೩ರಂದು ಹಮ್ಮಿಕೊಂಡಿದ್ದು, ತೋಟದ ಕಾರ್ಮಿಕರು ಆ ದಿನ ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಲಯ ಅರಣ್ಯಾಧಿಕಾರಿ ಕೆ.ಎಂ. ದೇವಯ್ಯ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.