ಮಡಿಕೇರಿ, ಜ. ೪ : ಸ್ಥಳೀಯ ಭಾಷೆ ಮತ್ತು ಸಂಸ್ಕೃತಿ ಜೀವಂತವಾಗಿರಬೇಕು. ಮೂಲ ಭಾಷೆಯನ್ನು ಮರೆಯಬಾರದು. ಆ ದಿಸೆಯಲ್ಲಿ ಸ್ಥಳೀಯ ಅರೆಭಾಷೆ ಬಳಸುವುದರಿಂದ ಸಂಸ್ಕೃತಿ ಉಳಿಸಲು ಸಾಧ್ಯವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಳ್ಯದ ಅಮರ ಜ್ಯೋತಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ ೨೦೧೯-೨೦ ಮತ್ತು ೨೦೨೦-೨೧ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮಾಡಿ ಸಚಿವರು ಮಾತನಾಡಿದರು.

ಸ್ಥಳೀಯ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಮತ್ತಷ್ಟು ವಿಸ್ತರಿಸುವಲ್ಲಿ ಮತ್ತು ಬಲಪಡಿಸುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅಕಾಡೆಮಿ ಮೂಲಕ ಹಲವು ಪ್ರಯತ್ನ ನಡೆಸುತ್ತಿದೆ, ಅರೆಭಾಷೆ ಕೇವಲ ದೈನಂದಿನ ಚಟುವಟಿಕೆಗೆ ಮಾತ್ರವಲ್ಲ. ನಮ್ಮ ಬದುಕಿನ ಭಾಷೆಯಾಗಿದೆ. ಭಾಷೆ, ಸಂಸ್ಕೃತಿ ಮತ್ತು ಜೀವನ ಪದ್ಧತಿ ಒಂದಕ್ಕೊAದು ಸಂಬAಧವಿದೆ. ಸ್ಥಳೀಯ ಅರೆಭಾಷೆಯು ಪ್ರೀತಿ, ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಸಚಿವರು ಹೇಳಿದರು.

ಸ್ಥಳೀಯ ಭಾಷೆಗಳನ್ನು ಉಳಿಸಿ ಬೆಳೆಸುವುದರಿಂದ ಮುಂದಿನ ಪೀಳಿಗೆಗೆ ಪರಿಚಯಿಸಲು ಸಾಧ್ಯ. ಆ ನಿಟ್ಟಿನಲ್ಲಿ ಮಾತೃಭಾಷೆ ಕಲಿಸುವ ಮತ್ತು ಪ್ರೀತಿಸುವ ಕೆಲಸ ಆಗಬೇಕು. ಆ ನಿಟ್ಟಿನಲ್ಲಿ ಅಕಾಡೆಮಿ ಮೂಲಕ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.

ಅರೆಭಾಷೆ ಸಾಹಿತ್ಯ, ಸಂಗೀತ, ಜಾನಪದ ಕಲೆ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾವಂತರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಸಮಾಜದ ಮೇಲೆ ಒಳ್ಳೆಯ ಪರಿಣಾಮ ಬೀರುತ್ತದೆ ಎಂದು ನುಡಿದರು. ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಮಾತನಾಡಿ ಸಾಂಸ್ಕೃತಿಕ ನೆಲೆಗಟ್ಟನ್ನು ಉಳಿಸುವಲ್ಲಿ ಸಾಧಕರಿಗೆ ಸನ್ಮಾನಿಸುತ್ತಿರುವುದು ಭಾಷೆ ಮತ್ತು ಸಂಸ್ಕೃತಿ ಉಳಿಸುವಲ್ಲಿ ಸಹಕಾರಿ ಯಾಗಿದೆ. ಆಯಾಯ ಪ್ರದೇಶದ ಸ್ಥಳೀಯ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ಕಲೆಗಳಿಗೆ ಪ್ರೋತ್ಸಾಹಿಸಬೇಕು. ಸ್ವಾತಂತ್ರö್ಯ ಪೂರ್ವದ ಮಹನೀಯರನ್ನು ಸ್ಮರಿಸಬೇಕು. ಸ್ವಾತಂತ್ರö್ಯ ಹೋರಾಟಕ್ಕೆ ಶ್ರಮಿಸಿದ ಕೆದಂಬಾಡಿ ರಾಮೇಗೌಡ ಅವರ ಹೆಸರಿನಲ್ಲಿ

(ಮೊದಲ ಪುಟದಿಂದ) ಸ್ಮಾರಕವನ್ನಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕಿದೆ ಎಂದು ಹೇಳಿದರು.

ಸುಳ್ಯ ಭಾಗದಲ್ಲಿ ಅರೆಭಾಷೆ ಬೆಳವಣಿಗೆಗೆ ಶ್ರಮಿಸಿದ ಮಹನೀಯರ ಇತಿಹಾಸ ತಿಳಿಯುವಂತಾಗಬೇಕು ಮತ್ತು ಪುಸ್ತಕ ಹೊರತರಬೇಕು ಎಂದು ಸಲಹೆ ಮಾಡಿದರು.

ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಮಾತನಾಡಿ ರಾಷ್ಟçದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ವಿವಿಧ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಕುಗ್ರಾಮದವರನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಲಾಗುತ್ತದೆ.

‘ಭಾಷೆ, ಸಂಸ್ಕೃತಿ, ಪರಂಪರೆ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ದಾಖಲು ಮಾಡಬೇಕು. ಭಾಷೆ, ಪರಂಪರೆ ಇತಿಹಾಸ ತಿಳಿದು ಮುನ್ನಡೆಯಬೇಕು. ಭಾಷೆ ನಾಶವಾದರೆ ಸಂಸ್ಕೃತಿ ನಾಶವಾಗುತ್ತದೆ ಎಂಬುದನ್ನು ಮರೆಯಬಾರದು ಎಂದು ಪ್ರತಿಪಾದಿಸಿದರು.’

ಮಾತೃಭಾಷೆಯನ್ನು ಮರೆಯಬಾರದು, ಪ್ರೀತಿಸಬೇಕು, ಗೌರವಿಸಬೇಕು. ಮತ್ತೊಬ್ಬರಿಗೆ ತಿಳಿಸಬೇಕು ಎಂದು ಅವರು ನುಡಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಅವರು ಮಾತನಾಡಿ ಕಳೆದ ಎರಡು ವರ್ಷ ಎರಡು ತಿಂಗಳಲ್ಲಿ ಸುಮಾರು ೧೧೫ ಕಾರ್ಯಕ್ರಮಗಳನ್ನು ಅಕಾಡೆಮಿ ವತಿಯಿಂದ ಏರ್ಪಡಿಸಲಾಗಿದೆ. ೧೫ ಸಂಸ್ಕೃತಿ ಶಿಬಿರಗಳು, ೨ ನಾಟಕ ಶಿಬಿರ, ೨ ಲೇಖನ ಕೌಶಲ್ಯ ಕಾರ್ಯಾಗಾರ, ೨ ವಿಶ್ವಕೋಶ ಕಾರ್ಯಾಗಾರ, ೩ ಅರ್ಥಕೋಶ ಕಾರ್ಯಾಗಾರ, ಹಾಗೆಯೇ ಒಂದು ವಾರಗಳ ಕಾಲ ಚಿತ್ರಕಲಾ ಶಿಬಿರ ಏರ್ಪಡಿಸಲಾಗಿದೆ ಎಂದರು.

ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಮಾತನಾಡಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಬೆಳವಣಿಗೆಗೆ ವಿವಿಧ ಕ್ರೀಯಾಶೀಲ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಉಪನ್ಯಾಸಕ ಪಟ್ಟಡ ಶಿವಕುಮಾರ್ ಪ್ರಶಸ್ತಿ ಪುರಸ್ಕೃತರ ಬಗ್ಗೆ ಮಾತನಾಡಿ ಅರೆಭಾಷೆ ಆಚಾರ-ವಿಚಾರ, ಪರಂಪರೆ ಉಳಿಸಿ ಬೆಳೆಸುವಲ್ಲಿ ಪ್ರಶಸ್ತಿ ಪುರಸ್ಕೃತರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

೨೦೧೯-೨೦ನೇ ಸಾಲಿಗೆ ಗೌರವ ಪ್ರಶಸ್ತಿ ಪುರಸ್ಕೃತರಾದ ಎನ್.ಎಸ್. ದೇವಿಪ್ರಸಾದ್ (ಸಾಹಿತ್ಯ), ಪಂಜಿಪಳ್ಳ ಇಂದ್ರಾಕ್ಷಿ ವೆಂಕಪ್ಪ (ಜಾನಪದ), ಮಾಧವಿ ಸೋನಾ, ಶಿವರಾಮಗೌಡ (ಸಾಹಿತ್ಯ), ಡಾ.ಕೋರನ ಸರಸ್ವತಿ ಪ್ರಕಾಶ್ (ಸಂಶೋಧನೆ), ಪದ್ಮಯ್ಯ ಗೌಡ ಎನ್. ಪರಿವಾರಕಾನ (ಪಾರಂಪಾರಿಕ ವೈದ್ಯ) ಇವರಿಗೆ ಶಾಲೂ, ಫಲಕ, ಸ್ಮರಣಿಕೆ ಜೊತೆಗೆ ತಲಾ ರೂ. ೫೦ ಸಾವಿರ ಚೆಕ್ ನೀಡಿ ಗೌರವಿಸಲಾಯಿತು.

‘ಸಾಹೇಬ್ರು ಬಂದವೇ’ ಅರೆಭಾಷೆ ರಂಗಪಯಣ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಅಕಾಡೆಮಿ ಸದಸ್ಯರಾದ ಬೈತಡ್ಕ ಜಾನಕಿ, ಸ್ಮಿತಾ ಅಮೃತರಾಜ್, ಚೊಕ್ಕಾಡಿ ಪ್ರೇಮ ರಾಘವಯ್ಯ, ಧನಂಜಯ ಅಗೋಳಿಕಜೆ, ದಂಬೆಕೋಡಿ ಎಸ್. ಆನಂದ, ಕೂಡಕಂಡಿ ದಯಾನಂದ, ಕುಸುಮಾಧರ ಎ.ಟಿ., ಡಾ. ವಿಶ್ವನಾಥ ಬದಿಕಾನ, ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ್ ಮೋಂಟಡ್ಕ ಬಿಳಿನೆಲೆ, ಡಾ.ಪುರುಷೋತ್ತಮ ಕೆ.ವಿ.ಕರಂಗಲ್ಲು, ಕಿರಣ್ ಕುಂಬಳಚೇರಿ, ಭರತೇಶ್ ಅಲಸಂಡೆಮಜಲು ಇತರರು ಇದ್ದರು.

ಕೆ.ಆರ್.ಗೋಪಾಲಕೃಷ್ಣ, ರಮ್ಯ ದಿಲೀಪ್, ಮಯೂರ್ ಅಂಬೆಕಲ್ಲು ಅವರು ಅರೆಭಾಷೆ ಹಾಡು ಹಾಡಿದರು. ಅಕಾಡೆಮಿ ಸದಸ್ಯರಾದ ವಿಶ್ವನಾಥ ಬದಿಕಾನ ಸ್ವಾಗತಿಸಿದರು. ಕುಸುಮಾದರ ಎ.ಟಿ. ನಿರೂಪಿಸಿದರು. ರಿಜಿಸ್ಟಾçರ್ ಚಿನ್ನಸ್ವಾಮಿ ವಂದಿಸಿದರು.