ಮಡಿಕೇರಿ, ಜ. ೯: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ. ೬ ಸಾವಿರಗಳನ್ನು ಪ್ರತಿ ೪ ತಿಂಗಳಿಗೊಮ್ಮೆಯAತೆ ಒಟ್ಟು ೩ ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸುಮಾರು ೪೯೫೮೨ ಜನ ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿರುತ್ತದೆ. ಈ ಸಂಬAಧ ಸದರಿ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ-ಕೆವೈಸಿ ಯನ್ನು ಎರಡು ವಿಧಾನಗಳಲ್ಲಿ ಕೈಗೊಳ್ಳಬಹುದಾಗಿದೆ:

ರೈತರು hಣಣಠಿ://ಠಿmಞisಚಿಟಿ.gov.iಟಿ ಪೋರ್ಟಲ್‌ನ ಈಚಿಡಿmeಡಿs ಅoಡಿಟಿeಡಿ ನ ಇ-ಕೆವೈಸಿ ಅವಕಾಶದಡಿ ರೈತನ (ಈಗಾಗಲೇ ಪಿಎಂ ಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊAದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‌ಗೆ ಒಟಿಪಿಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‌ನಲ್ಲಿ ದಾಖಲಿಸಿ “SUಃಒIಖಿ ಈಔಖ ಂUಖಿಊ” ಎಂಬ ಬಟನ್ ಒತ್ತಬೇಕು. ಆಗ ತಂತ್ರಾAಶ ಆಧಾರಿತ ಪರಿಶೀಲನೆ ನಡೆದು e-ಏಙಅ is “suಛಿಛಿessಜಿuಟಟಥಿ submiಣಣeಜ” ಎಂಬ ವಾಕ್ಯವು ಗೋಚರಿಸುತ್ತದೆ.

ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. “e-ಏಙಅ ಚಿಟಡಿeಚಿಜಥಿ ಜoಟಿe” ಎಂಬ ಮಾಹಿತಿ ಗೋಚರಿಸುತ್ತದೆ). ತಿಳಿಸಿದಂತೆ, ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊAದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿಗಾಗಿ ಕಳುಹಿಸಿದ ಒಟಿಪಿಯು ಸ್ವೀಕೃತವಾಗುದಿಲ್ಲವೋ ಅವರು ಸಿಎಸ್‌ಸಿ (ಅiಣizeಟಿ seಡಿviಛಿe ಛಿeಟಿಣಡಿes)- ನಾಗರಿಕ ಸೇವಾ ಕೇಂದ್ರಗಳಿಗೆ) ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿರುತ್ತದೆ.

ವಿಶೇಷ ಸೂಚನೆ: ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ (ಏಪ್ರಿಲ್ ೨೨ ರಿಂದ ಜುಲೈ ೨೨ ರವರೆಗೆ) ನೀಡುವ ಆರ್ಥಿಕ ನೆರವು ಪಡೆಯಲು ೩೧ನೇ ಮಾರ್ಚ್ ೨೦೨೨ ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಅiಣizeಟಿ seಡಿviಛಿe ಛಿeಟಿಣಡಿes (ನಾಗರಿಕ ಸೇವಾ ಕೇಂದ್ರ)ಗಳನ್ನು ಸಂಪರ್ಕಿಸಬಹುದು.