ಮಡಿಕೇರಿ, ಜ.೧೩: ಭಾರೀ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು ಪರಿಹಾರ ತಲುಪಿಲ್ಲ ಎಂಬ ದೂರುಗಳು ಬರುತ್ತಿದ್ದು, ಈ ಹಿನ್ನೆಲೆ ಮನೆ ನಿರ್ಮಿಸಿದ್ದಲ್ಲಿ ಆಯಾಯ ಹಂತದ ಅನುಗುಣವಾಗಿ ತಕ್ಷಣವೇ ಪರಿಹಾರ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ಇಂತಹ ಪ್ರಕರಣಗಳನ್ನು ನಿಯಮಾನುಸಾರ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ ೨೦೧೯, ೨೦೨೦ ಮತ್ತು ೨೦೨೧ ರಲ್ಲಿ ಸಂಭವಿಸಿದ ಭಾರಿ ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಣೆ ಸಂಬAಧ ನಗರದ ಮಡಿಕೇರಿ, ಜ.೧೩: ಭಾರೀ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು ಪರಿಹಾರ ತಲುಪಿಲ್ಲ ಎಂಬ ದೂರುಗಳು ಬರುತ್ತಿದ್ದು, ಈ ಹಿನ್ನೆಲೆ ಮನೆ ನಿರ್ಮಿಸಿದ್ದಲ್ಲಿ ಆಯಾಯ ಹಂತದ ಅನುಗುಣವಾಗಿ ತಕ್ಷಣವೇ ಪರಿಹಾರ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ಇಂತಹ ಪ್ರಕರಣಗಳನ್ನು ನಿಯಮಾನುಸಾರ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿ ೨೦೧೯, ೨೦೨೦ ಮತ್ತು ೨೦೨೧ ರಲ್ಲಿ ಸಂಭವಿಸಿದ ಭಾರಿ ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ವಿತರಣೆ ಸಂಬAಧ ನಗರದ ಸರ್ವೆ ಮಾಡಿ ಹಣ ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.
ಪ್ರತೀ ಗ್ರಾಮ ಮತ್ತು ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳು ಮನೆ ನಿರ್ಮಾಣ ಸಂಬAಧಿಸಿದAತೆ ಪರಿಶೀಲಿಸಿ ವರದಿ ನೀಡಬೇಕು. ಜಿಪಿಎಸ್ ಅಪ್ಲೋಡ್ ಸಂಬAಧಿಸಿದAತೆ ಪಿಡಿಓಗಳು ಮತ್ತು ತಹಶೀಲ್ದಾರರು ತಮ್ಮ ಹಂತದಲ್ಲಿ ಎಷ್ಟಿವೆ ಎಂಬ ಬಗ್ಗೆ ದೈನಂದಿನ ಮಾಹಿತಿ ನೀಡಬೇಕು. ಜೊತೆಗೆ ಆದ್ಯತೆ ಮೇಲೆ ಕೆಲಸ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಹೊಳೆ ಬದಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಒಂದು ಲಕ್ಷ ರೂ ಪರಿಹಾರ ನೀಡಲಾಗಿದೆ. ಮನೆ ನಿರ್ಮಾಣ ಸಂಬAಧ ೪ ಹಂತದಲ್ಲಿ ಪರಿಹಾರ ಹಣ ಬಿಡುಗಡೆ ಮಾಡಲಾಗುತ್ತದೆ. ಒಂದು ಲಕ್ಷ ರೂ ಪರಿಹಾರ ಪಡೆದ ಕುಟುಂಬಗಳು ಇದುವರೆಗೆ ಮನೆ ನಿರ್ಮಾಣಕ್ಕೆ ಮುಂದಾಗದಿದ್ದಲ್ಲಿ, ಅಂತಹ ಕುಟುಂಬಗಳಿಗೆ ಈಗಾಗಲೇ ಅಂತಿಮ ನೋಟೀಸು ನೀಡಲಾಗಿದೆ. ಆದರೂ ಮನೆ ಕಟ್ಟಲು/ ದುರಸ್ತಿ ಮಾಡಿಕೊಳ್ಳಲು ಆಸಕ್ತಿ ತೋರದಿದ್ದಲ್ಲಿ ಇದೇ ಹಂತದಲ್ಲಿಯೇ ಮುಕ್ತಾಯ ಗೊಳಿಸಲಾಗುವುದು ಎಂಬ ಸ್ಪಷ್ಟ ಸಂದೇಶವನ್ನು ಎಲ್ಲಾ ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಅಧಿಕಾರಿಗಳ ಮುಖಾಂತರ ಫಲಾನುಭವಿಗಳಿಗೆ ಮಾಹಿತಿ ನೀಡಲು ಸೂಚಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಭೂ ದಾಖಲೆಗಳ ಉಪ ನಿರ್ದೇಶ ಪಿ.ಶ್ರೀನಿವಾಸ್, ತಹಶೀಲ್ದಾರರಾದ ಮಹೇಶ್, ಗೋವಿಂದರಾಜು, ಯೋಗಾನಂದ, ಪ್ರಕಾಶ್, ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ತಾ.ಪಂ.ಇಒಗಳಾದ ಜಯಣ್ಣ ಇತರರು ಮಾಹಿತಿ ನೀಡಿದರು.