ಪೊನ್ನಂಪೇಟೆ, ಜ. ೧೨: ಜೆಸಿಐ ಭಾರತದ ವತಿಯಿಂದ ಕಳೆದ ಆಗಸ್ಟ್ ೮ ರಂದು ವಿದ್ಯಾರ್ಥಿಗಳಿಗಾಗಿ ದೇಶದಾದ್ಯಂತ ಏಕಕಾಲಕ್ಕೆ ನಡೆದ ‘ಜೆಸಿಐ ಭಾರತ ರಾಷ್ಟçಮಟ್ಟದ ಪ್ರತಿಭಾನ್ವೇಷಣೆ ಪರೀಕ್ಷೆ -೨೦೨೧' (ಎನ್.ಎಲ್.ಟಿ.ಎಸ್.)ರ ಫಲಿತಾಂಶದಲ್ಲಿ ಜೇಸಿಸ್ ವಲಯ ೧೪ರಲ್ಲೇ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ ಕೊಡಗಿನ ವಿದ್ಯಾರ್ಥಿನಿ ಅಪೇಕ್ಷಾ ದೇಚಮ್ಮಗೆ ನಗದು ಬಹುಮಾನ ಮತ್ತು ಪಾರಿತೋಷಕ ವಿತರಿಸಲಾಯಿತು.
ಬಿಟ್ಟಂಗಾಲದ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ನಡೆದ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ೧೧ನೇ ಘಟಕಾಡಳಿತ ಮಂಡಳಿಯ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ಜೇಸಿಸ್ನ ವಲಯ ೧೪ರ ನಿಕಟಪೂರ್ವ ವಲಯಾಧ್ಯಕ್ಷರು ಮತ್ತು ಜೆಸಿಐ ಭಾರತದ ಅಧಿಕೃತ ಸಂಚಿಕೆಯ ಸಂಪಾದಕ ಮಂಡಳಿಯ ಮುಖ್ಯಸ್ಥರೂ ಆಗಿರುವ ಸೆನೆಟರ್ ಭರತ್ ಎನ್. ಆಚಾರ್ಯ ಅವರು ಜೆಸಿಐ ಭಾರತದ ವತಿಯಿಂದ ನೀಡಲಾದ ರೂ. ೫ ಸಾವಿರ ನಗದು ಮತ್ತು ವಿಶೇಷ ಪಾರಿತೋಷಕವನ್ನು ಅಪೇಕ್ಷಾ ದೇಚಮ್ಮಗೆ ಹಸ್ತಾಂತರಿಸಿ ಗೌರವಿಸಿದರು.
ಜೆಸಿಐ ಪೊನ್ನಂಪೇಟೆ ನಿಸರ್ಗ (ನಿಸರ್ಗ ಜೇಸಿಸ್) ಘಟಕದ ವತಿಯಿಂದ ಕಳೆದ ಆಗಸ್ಟ್ ೮ ರಂದು ಆನ್ಲೈನ್ ಮೂಲಕ ಪರೀಕ್ಷೆ ಬರೆದ ೨೩೪ ವಿದ್ಯಾರ್ಥಿಗಳಲ್ಲಿ ಗೋಣಿಕೊಪ್ಪಲು ಬಳಿಯ ಕಳತ್ಮಾಡಿನ ಲಯನ್ಸ್ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಅಪೇಕ್ಷಾ ದೇಚಮ್ಮ ಇಡೀ ವಲಯದಲ್ಲಿ ಪರೀಕ್ಷೆ ಎದುರಿಸಿದ ಒಟ್ಟು ೧೦೫೦೭ ವಿದ್ಯಾರ್ಥಿಗಳ ಪೈಕಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ಈಕೆ ಗೋಣಿಕೊಪ್ಪಲು ಸಮೀಪದ ಕೈಕೇರಿ ನಿವಾಸಿಗಳಾದ ವಿ.ಎಂ. ಲವ ಮತ್ತು ವಿನು ದಂಪತಿಗಳ ಪುತ್ರಿ.
ಘಟಕದ ನೂತನ ಅಧ್ಯಕ್ಷ ಎ.ಪಿ. ದಿನೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜೆಸಿಐ ಭಾರತದ ಸೀನಿಯರ್ ಮೆಂಬರ್ಸ್ ಅಸೋಸಿಯೇಷನ್ (ಎಸ್.ಎಂ.ಎ.) ರಾಷ್ಟಿçÃಯ ಮಂಡಳಿ ನಿರ್ದೇಶಕರಾದ ಎ.ಎಸ್. ನರೇನ್ ಕಾರ್ಯಪ್ಪ, ವಲಯ ೧೪ರ 'ಡಿ' ಪ್ರಾಂತ್ಯದ ವಲಯ ಉಪಾಧ್ಯಕ್ಷರಾದ ಯಶಸ್ವಿನಿ, ಜೆಸಿಐ ಭಾರತದ ಎಸ್.ಎಂ.ಎ. ವಲಯ ಮಂಡಳಿ ಮುಖ್ಯಸ್ಥರಾದ ಮೈಸೂರಿನ ಕೆ.ಎಸ್. ಕುಮಾರ್, ಎಸ್. ಎಂ.ಎ ವಿಭಾಗದ ವಲಯ ಸಂಯೋಜಕ ಬಿ.ಈ. ಕಿರಣ್, ನಿರ್ಗಮಿತ ಅಧ್ಯಕ್ಷ ಎಂ.ಎನ್. ವನಿತ್ಕುಮಾರ್, ನೂತನ ಕಾರ್ಯದರ್ಶಿ ಶರತ್ ಸೋಮಣ್ಣ, ಜೂನಿಯರ್ ಜೇಸಿ ವಿಭಾಗದ ಮುಖ್ಯಸ್ಥರಾದ ಎ.ಡಿ. ಚರಣ್ ಚಂಗಪ್ಪ ಉಪಸ್ಥಿತರಿದ್ದರು.