ಕೂಡಿಗೆ, ಜ. ೧೯: ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೂ. ೪ ಕೋಟಿ ೪೭ ಲಕ್ಷ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಲೋಕೋಪ ಯೋಗಿ ಇಲಾಖೆಗೆ ಸೇರಿದ ವಿವಿಧ ಅನುದಾನದಲ್ಲಿ ಕೂಡಿಗೆ, ಕೂಡುಮಂಗಳೂರು ಮುಳ್ಳುಸೋಗೆ, ಗುಡ್ಡೆಹೊಸೂರು ವ್ಯಾಪ್ತಿಯ ಕಾಂಕ್ರಿಟ್ ರಸ್ತೆಗಳು, ಗ್ರಾಮದ ಉಪ ರಸ್ತೆಗಳು ಮತ್ತು ವಿವಿಧ ಬಡಾವಣೆಗಳ ಸಂಪರ್ಕ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ನಂತರ ಶಾಸಕರು ಮಾತನಾಡಿ, ಗ್ರಾಮಗಳ ಸಂಪರ್ಕಕ್ಕೆ ರಸ್ತೆ ಪ್ರಮುಖ ಸಾದನ, ಸರಕಾರ ಗ್ರಾಮದ ಪ್ರಗತಿಗೆ ಪೂರಕವಾದ ಹೊಸ ಯೋಜನೆ ಯನ್ನು ಜಾರಿಗೆ ತಂದಿದೆ. ಅದರ ಮೂಲಕ ಗ್ರಾಮ ಅಭಿವೃದ್ಧಿಗೆ ವಿವಿಧ ಯೋಜನೆಯನ್ನು ರೂಪಿಸಿ ಗ್ರಾಮಗಳ ಅಭಿವೃದ್ಧಿಪಡಿಸಲು ಚಿಂತನೆ ಹರಿಸಲಾಗಿದೆ. ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವುದರ ಮೂಲಕ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಕೂಡುಮಂಗಳೂರು ಅಧ್ಯಕ್ಷೆ ಇಂದಿರಾ ರಮೇಶ್, ಮುಳ್ಳುಸೋಗೆ ಅಧ್ಯಕ್ಷ ಚಲುವರಾಜ್, ಗುಡ್ಡೆಹೊಸೂರು ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಮೋಹಿನಿ ತಮ್ಮಣೆಗೌಡ, ಜಯಮ್ಮ, ಯಶೋಧ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್, ಕೂಡ ಅಧ್ಯಕ್ಷ ಚರಣ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕೆ.ಆರ್. ಮಂಜಳಾ, ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ಕುಶಾಲನಗರ ಪಟ್ಟಣ ಪಂಚಾಯಿತಿ ಸದಸ್ಯರಾದ ಅಮೃತ್ ರಾಜ್, ಪ್ರವೀಣ್ ವೈಶಾಕ್, ಪುಂಡರೀಕಾಕ್ಷ ಕೆ. ವರದ, ಕೆ.ಕೆ. ಭೋಗಪ್ಪ, ವಾಂಚಿರ ಮನು ನಂಜುAಡ, ಪ್ರಭಾಕರ, ಕೂಡಿಗೆ ಕೂಡುಮಂಗಳೂರು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರುಗಳು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಘಟಕ ಪದಾಧಿಕಾರಿಗಳು ಹಾಗೂ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.