ಮಡಿಕೇರಿ, ಜ. ೨೧: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಫೆಬ್ರವರಿ ಮಾಹೆಯಲ್ಲಿ ತರಾಸು ಅವರ ಬದುಕು-ಬರಹ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಲಿದೆ. ವಿಚಾರ ಸಂಕಿರಣದಲ್ಲಿ ಪರ್ಯಾಯ ಗೋಷ್ಠಿಗಳು ನಡೆಯಲಿವೆ. ತರಾಸು. ಅವರ ಬದುಕು-ಬರಹ ಕುರಿತು ಪ್ರಬಂಧ ಮಂಡಿಸುವವರು ಅರ್ಜಿಯೊಂದಿಗೆ ಪ್ರಬಂಧ ಸಲ್ಲಿಸಬೇಕು. ತಾ. ೨೯ ರೊಳಗೆ ಅಕಾಡೆಮಿಗೆ ರಿಜಿಸ್ಟಾçರ್ ಅಂಚೆ ಅಥವಾ ಕೊರಿಯರ್ ಮೂಲಕ ನಿಬಂಧನೆಗೊಳಪಟ್ಟು ಅರ್ಜಿಯೊಂದಿಗೆ ಪ್ರಬಂಧಗಳನ್ನು ಸಲ್ಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ hಣಣಠಿ://sಚಿhiಣhಥಿಚಿಚಿಛಿಚಿಜemಥಿ. ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಎನ್. ಕರಿಯಪ್ಪ ಅವರು ತಿಳಿಸಿದ್ದಾರೆ.