ಮಡಿಕೇರಿ, ಜ. ೨೨: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬದಲಾದ ಹಾಕಿ ನಿಯಮದ ಬಗ್ಗೆ ಕಾರ್ಯಾಗಾರ ಇತ್ತೀಚೆಗೆ ಏರ್ಪಡಿಸಲಾಗಿತ್ತು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕರಾದ ಚಂದ್ರನಾಯಕ್, ವಿಶೇಷ ಅತಿಥಿಯಾಗಿ ಆಗಮಿಸಿದ್ದ ಹಾಕಿ ತರಬೇತಿದಾರರಾದ ಬಿಂಧ್ಯಾ ಡಿವೈಎಸ್‌ಎಸ್ ಅವರು ಹಾಕಿ ಆಟದ ಬದಲಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಶ್ರೀನಿವಾಸ್ ಅವರು ಮಾತನಾಡಿ ದೈಹಿಕ ಶಿಕ್ಷಣ ವಿಷಯಕ್ಕೆ ಸಂಬAಧಿಸಿದAತೆ ಕಾಲ ಕಾಲಕ್ಕೆ ಕ್ರೀಡಾ ನಿಯಮಗಳಲ್ಲಿ ಆಗುವ ಬದಲಾವಣೆ ಅರಿತುಕೊಂಡು ಕೆಲಸ ಮಾಡೋಣ ಎಂದರು.

ಸಭೆಯಲ್ಲಿ ಉಪಾಧ್ಯಕ್ಷೆ ಪ್ರೇಮ ಲತಾಶೆಡ್ತಿ, ತಾಲೂಕಿನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಹಾಜರಿದ್ದರು. ರತಿಕುಮಾರಿ ಪ್ರಾರ್ಥಿಸಿದರು. ಮಡಿಕೇರಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ್ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಶಿವಪ್ರಸಾದ್ ಕೆ. ನಿರೂಪಿಸಿ, ವಂದಿಸಿದರು.

ಮಡಿಕೇರಿ ತಾಲೂಕು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಇತ್ತೀಚೆಗೆ ನಿವೃತ್ತರಾದ ನಂತರ ದಿವಂಗತರಾದ ಪಿ.ಕೆ. ಮುತ್ತಪ್ಪ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ, ಪುಷ್ಪ ನಮನ ಸಲ್ಲಿಸಲಾಯಿತು.