ವೀರಾಜಪೇಟೆ, ಜ. ೨೩: ಜೀವನದಲ್ಲಿ ಜಿಗುಪ್ಸೆಗೊಂಡು ಕಾರ್ಮಿಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಅಮ್ಮತ್ತಿ ಕಾರ್ಮಡು ಗ್ರಾಮದಲ್ಲಿ ನಡೆದಿದೆ.
ಅಮ್ಮತ್ತಿ ಕಾರ್ಮಾಡಿನ ಶೆಟ್ಟಿಬಾಣೆಯ ನಿವಾಸಿ ಪಣಿ ವೈ.ಎಂ. ಗಣೇಶ ೩೫ ನೇಣಿಗೆ ಶರಣಾದ ವ್ಯಕ್ತಿ. ಮೃತನಾದ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ. ವಾಸಿಯಾಗದ ಕಾಯಿಲೆಗೆ ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆದರೂ ಪ್ರಯೋಜನವಾಗಿರಲಿಲ್ಲ. ಇದರಿಂದ ಮನನೊಂದು ಯಾರು ಇಲ್ಲದ ಸಮಯದಲ್ಲಿ ಮನೆಯ ಕೋಣೆಯೊಂದರಲ್ಲಿ ಮೇಲ್ಚಾವಣಿಯ ಕಬ್ಬಿಣದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತನ ತಂದೆ ಮೋಟ ಅವರು ನೀಡಿದ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಮೃತ ಶರೀರವನ್ನು ವೀರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. -ಕೆ.ಕೆ.ಎಸ್.