ಕೂಡಿಗೆ, ಜ. ೨೫: ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಬ್ಯಾಡಗೊಟ್ಟ ಮತ್ತು ಹುದುಗೂರು ವ್ಯಾಪ್ತಿಯಲ್ಲಿ ಈಗಾಗಲೇ ನಿಗದಿಯಾದ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನವನ್ನು ಕಂದಾಯ ಇಲಾಖೆಯ ನಿಯಮಾನು ಸಾರವಾಗಿ ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.

ಸೀಗೆಹೊಸೂರು ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಬ್ಯಾಡಗೊಟ್ಟ ಗ್ರಾಮ ದಲ್ಲಿ ಕಾದಿರಿಸಿರುವ ಎರಡು ಎಕರೆಗಳಷ್ಟು ಪ್ರದೇಶದಲ್ಲಿ ವಸತಿ ರಹಿತರಿಗೆ ನಿವೇಶನ ನೀಡುವ ಸಲುವಾಗಿ ಕಂದಾಯ ಇಲಾಖೆ ವತಿಯಿಂದ ಸರ್ವೆ ಕಾರ್ಯ ನಡೆದಿದೆ. ಅದರಂತೆ ಗ್ರಾ.ಪಂ. ಗ್ರಾಮಸಭೆ, ಮತ್ತು ಮಾಸಿಕ ಸಭೆಯಲ್ಲಿ ಆಯ್ಕೆಯಾದ ಫಲಾನು ಭವಿಗಳಿಗೆ ನೀಡಲು ಈಗಾಗಲೇ ಪಟ್ಟಿ ತಯಾರಾಗಿದೆ. ಅದರ ಅನುಗುಣವಾಗಿ ಅರ್ಹ ಫಲಾನುಭವಿಗಳಿಗೆ ಅತಿ ಶೀಘ್ರದಲ್ಲಿ ನೀಡಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಮಂಗಳಾ ಪ್ರಕಾಶ್ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ಸೇರಿದಂತೆ ಆಯಾ ವ್ಯಾಪ್ತಿಯ ಸದಸ್ಯರು ಮತ್ತು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ಹಾಜರಿದ್ದರು.