ಮಡಿಕೇರಿ, ಜ. ೨೮: ಕೋವಿ ಹಕ್ಕು ಕುರಿತಂತೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸತೀಶ ಅವರನ್ನು ಜಿಲ್ಲೆಯ ವಿವಿಧ ಕೊಡವ ಸಮಾಜಗಳ ಮುಖಂಡರು ಭೇಟಿ ಮಾಡಿದರು.

ಕೂರ್ಗ್ ಬೈ ರೇಸ್ ಕುರಿತು ರಾಜ್ಯ ಸರಕಾರದಿಂದ ಅಭಿಪ್ರಾಯ ಕೇಳಿ ಜಿಲ್ಲಾಧಿಕಾರಿಗಳು ಸಲ್ಲಿಸಿರುವ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಈ ಸಂದರ್ಭ ಆಗ್ರಹಿಸಲಾಯಿತು.

ಕೂರ್ಗ್ ಬೈ ರೇಸ್‌ನಡಿ ಕೊಡವರು ಮಾತ್ರ ಕೋವಿಯ ಹಕ್ಕುದಾರರಾಗಿದ್ದು, ಇತರರಿಗೆ ಜಮ್ಮಾ ಹಿಡುವಳಿಯಲ್ಲಿ ಕೋವಿ ನೀಡುತ್ತಿರುವುದಕ್ಕೆ ತಮ್ಮ ಅಭ್ಯಂತರವಿಲ್ಲ ಎಂದು ಮನವಿದಾರರು ಮನವರಿಕೆ ಮಾಡಿದರು.

ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲಾದ ಸಂದರ್ಭದಲ್ಲಿ ಅಖಿಲ ಕೊಡವ ಸಮಾಜ ಅಧ್ಯಕ್ಷ ಮಾತಂಡ ಮೊಣ್ಣಪ್ಪ, ಉಪಾಧ್ಯಕ್ಷ ಅಜ್ಜಿಕುಟ್ಟೀರ ಸುಬ್ರಮಣಿ ಮಾದಯ್ಯ, ಪ್ರಧಾನ ಕಾರ್ಯದರ್ಶಿ ಅಮ್ಮುಣಿಚಂಡ ರಾಜ ನಂಜಪ್ಪ, ಕೊಡವ ಸಮಾಜ ಒಕ್ಕೂಟ ಪ್ರಧಾನ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ, ಅಖಿಲ ಕೊಡವ ಸಮಾಜ ಸದಸ್ಯ ತೇಲಪಂಡ ಪ್ರಮೋದ್ ಸೋಮಯ್ಯ, ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ, ವೀರಾಜಪೇಟೆ ಕೊಡವ ಸಮಾಜ ಅಧ್ಯಕ್ಷ ವಾಂಚೀರ ನಾಣಯ್ಯ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಅಮ್ಮತ್ತಿ ಕೊಡವ ಸಮಾಜ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ, ಕುಶಾಲನಗರ ಕೊಡವ ಸಮಾಜ ಅಧ್ಯಕ್ಷ ಮಂಡೇಪAಡ ಬೋಸು ಮೊಣ್ಣಪ್ಪ, ಬೆಂಗಳೂರು ಯೂತ್ ಕೌನ್ಸಿಲ್ ಅಧ್ಯಕ್ಷ ಚೋಕಂಡ ಸೂರಜ್ ಸೋಮಯ್ಯ, ಮಡಿಕೇರಿ ಕೊಡವ ಸಮಾಜದ ಸದಸ್ಯರಾದ ನಂದೇಟೀರ ರಾಜ ಮಾದಪ್ಪ ಹಾಗೂ ಪುಟ್ಟಿಚಂಡ ಡಾನ್ ದೇವಯ್ಯ, ತಲಕಾವೇರಿ ಮೂಲ ಸ್ವರೂಪ ರಕ್ಷಣಾ ವೇದಿಕೆ ಸಂಚಾಲಕ ಉಳ್ಳಿಯಡ ಎಂ. ಪೂವಯ್ಯ, ಐನಂಡ ಕುಟ್ಟಪ್ಪ ಮೊದಲಾದವರು ಉಪಸ್ಥಿತರಿದ್ದರು.