ರಾಜ್ಯದಲ್ಲಿ ಕೊರೊನಾಗೆ ೫೦ ಬಲಿ

ಬೆಂಗಳೂರು, ಜ. ೨೮: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ ೨೪ ಗಂಟೆಯಲ್ಲಿ ೩೧,೧೯೮ ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ೩೭,೨೩,೬೯೪ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾದಿಂದ ೫೦ ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ೩೮,೮೦೪ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ೧೫,೧೯೯ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೬,೮೧,೬೭೪ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಕೊರೊನಾದಿಂದ ೮ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ೭೧,೦೯೨ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೩೩,೯೬,೦೯೩ಕ್ಕೆ ಏರಿಕೆಯಾಗಿದೆ. ೨,೮೮,೭೬೭ ಸಕ್ರಿಯ ಪ್ರಕರಣಗಳಿವೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು, ಜ. ೨೮: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ವಸಂತನಗರದಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ೩೦ ವರ್ಷ ವಯಸ್ಸಿನ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ಶಸ್ತçಚಿಕಿತ್ಸೆಯ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಇಂದು ಸೌಂದರ್ಯ ತಾವು ವಾಸವಿದ್ದ ಅಪಾರ್ಟ್ಮೆಂಟ್‌ನಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ಕಂಡ ತಕ್ಷಣ ಕೆಳಗಿಳಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಲ್ಲಿಗೆ ತಲುಪುವಷ್ಟರ ಹೊತ್ತಿಗೆ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಆಕೆಯ ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಿ. ಸುಧಾಕರ್ ಶವಾಗಾರಕ್ಕೆ ಭೇಟಿ ನೀಡಿದ್ದರು. ಸೌಂದರ್ಯ ಅವರು ಎಂ.ಎಸ್. ರಾಮಯ್ಯ ಕಾಲೇಜಿನಲ್ಲಿ ಸರ್ಜರಿಯಲ್ಲಿ ಸ್ನಾತಕೋತ್ತರ ಪದವಿ (ಎಂಎಸ್) ಪಡೆದಿದ್ದರು. ಅವರು ಎಂ.ಎಸ್. ರಾಮಯ್ಯ ಕಾಲೇಜಿನ ರೇಡಿಯಾಲಜಿಸ್ಟ್ ಡಾ. ನೀರಜ್ ಅವರನ್ನು ವಿವಾಹವಾಗಿದ್ದರು. ಕಳೆದ ವರ್ಷ ದಂಪತಿಗೆ ಮಗುವಾಗಿತ್ತು. ಪ್ರಸವಾ ನಂತರದ ಖಿನ್ನತೆಯು ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಿರಬಹುದು ಎನ್ನಲಾಗಿದೆ.

ದಕ್ಷಿಣ ಆಫ್ರಿಕಾದ ಬಾವಲಿಗಳಲ್ಲಿ ನಿಯೋಕೋವ್ ಕೊರೊನಾ ವೈರಸ್ ಪತ್ತೆ

ಬೀಜಿಂಗ್, ಜ. ೨೮: ಕೊರೊನಾ ವೈರಸ್ ಹೊಸ ಹೊಸ ರೂಪಾಂತರಿಗಳು ಭಾರತ ಸೇರಿದಂತೆ ಇಡೀ ಜಗತ್ತಿನಲ್ಲೇ ತೀವ್ರ ಆತಂಕ ಸೃಷ್ಟಿಸುತ್ತಿರುವುದರ ನಡುವೆಯೇ ದಕ್ಷಿಣ ಆಫ್ರಿಕಾದಲ್ಲಿ ಬಾವಲಿಗಳ ನಡುವೆ ಹರಡುವ ನಿಯೋಕೋವ್ ಹೊಸ ಕೊರೊನಾ ವೈರಸ್ ಪತ್ತೆಯಾಗಿದ್ದು, ಇದು ಭವಿಷ್ಯದಲ್ಲಿ ಮನುಷ್ಯರಿಗೂ ಅಪಾಯವನ್ನುಂಟುಮಾಡುತ್ತದೆ ಎಂದು ಚೀನಾದ ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ. ನಿಯೋಕೋವ್ ವೈರಸ್ ವೈರಸ್ ತುಂಬಾ ಸಾಂಕ್ರಾಮಿಕವಾಗಿದ್ದು, ಹೆಚ್ಚು ಮಾರಣಾಂತಿಕವಾಗಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಮೂವರು ಸೋಂಕಿತರಲ್ಲಿ ಒಬ್ಬ ರೋಗಿ ಸಾವನ್ನಪ್ಪಬಹುದು ಎಂದು ಅಂದಾಜಿಸಿದ್ದಾರೆ. ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿಯ ಪ್ರಕಾರ, ಹೊಸ ಕೊರೊನಾ ವೈರಸ್ ನಿಯೋಕೋವ್ ಸಹ ಒಇಖS-ಅoಗಿ ವೈರಸ್‌ಗೆ ಸಂಬAಧಿಸಿದ್ದಾಗಿದೆ. ಇದು, ೨೦೧೨ ಮತ್ತು ೨೦೧೫ರಲ್ಲಿ ಪಶ್ಚಿಮ ಏಷ್ಯಾದ ದೇಶಗಳಲ್ಲಿ ಮೊದಲು ಪತ್ತೆಯಾಗಿತ್ತು. ಈ ಹೊಸ ಕೊರೊನಾ ವೈರಸ್ ನಿಯೋಕೋವ್ ಇನ್ನೂ ಮನುಷ್ಯರಿಗೆ ಹರಡಿಲ್ಲ. ದಕ್ಷಿಣ ಆಫ್ರಿಕಾದಲ್ಲಿ ಈ ವೈರಸ್ ಬಾವಲಿಗಳಲ್ಲಿ ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಈ ವೈರಸ್ ಪ್ರಾಣಿಗಳಲ್ಲಿ ಮಾತ್ರ ಕಂಡುಬAದಿದೆ. ಆದರೆ ಅದರ ಮತ್ತಷ್ಟು ರೂಪಾಂತರಿಗಳು ಮನುಷ್ಯರಿಗೆ ತಗುಲಬಹುದು ಎಂದು ಸಂಶೋಧಕರು ಹೇಳಿದ್ದಾರೆ.

ಐಟಿ ಸೋಗಿನಲ್ಲಿ ದರೋಡೆ : ಐವರ ಸೆರೆ

ಬೆಂಗಳೂರು, ಜ. ೨೮: ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ, ನಗದು, ಪಿಸ್ತೂಲ್‌ನ್ನು ದರೋಡೆ ಮಾಡಿದ್ದ ಐವರು ಆರೋಪಿಗಳನ್ನು ಬಂದಿಸುವಲ್ಲಿ ಸಂಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂದಿತರಿAದ ೧.೭ ಲಕ್ಷ ನಗದು, ಕಾರು ಹಾಗೂ ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸಂಜಯನಗರದ ಮಂಜುನಾಥ್, ಮಹಮ್ಮದ್ ಶೋಯಬ್ ರಬ್ಬಾನಿ ಅಲಿಯಾಸ್ ಪಾಕರ್ ಅಲಿ, ಪ್ರಶಾಂತ್ ಕುಮಾರ್, ದುರ್ಗೇಶ ಹಾಗೂ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ವಿನಾಯಕ ವಸಂತರಾವ್ ಪಾಟೀಲ್ ತಿಳಿಸಿದ್ದಾರೆ. ತಾ. ೨೩ ರಂದು ಬೆಳಿಗ್ಗೆ ೮.೪೫ರ ವೇಳೆ ಸಂಜಯನಗರದ ಮನೆಯೊಂದಕ್ಕೆ ಬಂದ ಬಂಧಿತರಲ್ಲಿ ಇಬ್ಬರು, ನಾವು ಆದಾಯ ತೆರಿಗೆ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದು, ಮನೆ ಪರಿಶೀಲಿಸಬೇಕೆಂದು ಹೇಳಿ, ವಾರ್ಡ್ ರೂಮ್‌ನ ಲಾಕರ್‌ನಲ್ಲಿದ್ದ ೩.೫ ಲಕ್ಷ ರೂಪಾಯಿ ನಗದು ಹಾಗೂ ಒಂದು ಪಿಸ್ತೂಲ್‌ನ್ನು ತೆಗೆದುಕೊಂಡು ಹೋಗಿದ್ದರು. ಈ ಸಂಬAಧ ಅನುಮಾನಗೊಂಡ ಮನೆ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ರೂ. ೧.೭ ಲಕ್ಷ ಹಣ, ೧ ಪಿಸ್ತೂಲ್ ಹಾಗೂ ಕೃತ್ಯಕ್ಕೆ ಬಳಸಿದ ಕಾರು, ಆದಾಯ ತೆರಿಗೆ ಇಲಾಖೆ ಹೆಸರಿನ ನಕಲಿ ಗುರುತಿನ ಚೀಟಿಯನ್ನು ವಶಕ್ಕೆ ಪಡೆದಿದ್ದಾರೆ.

ನಿವೃತ್ತಿ ಹೊಂದಿದ ಐಎನ್‌ಎಸ್ ಖುಕ್ರಿ ಮ್ಯೂಸಿಯಂ ಆಗಿ ಪರಿವರ್ತನೆ

ನವದೆಹಲಿ, ಜ. ೨೮: ಕಳೆದ ಡಿಸೆಂಬರ್‌ನಲ್ಲಿ ಸೇವೆಯಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ ಭಾರತೀಯ ನೌಕಾಪಡೆಯ ಮೊದಲ ಸ್ವದೇಶಿ ನಿರ್ಮಿತ ಕ್ಷಿಪಣಿ ಕಾರ್ವೆಟ್ ಐಎನ್‌ಎಸ್ ಖುಕ್ರಿಯನ್ನು ಶೀಘ್ರದಲ್ಲೇ ಮ್ಯೂಸಿಯಂ ಆಗಿ ಪರಿವರ್ತನೆ ಮಾಡಲಾಗುವುದು ಎಂದು ಸೇನಾ ಮೂಲಗಳು ಹೇಳಿವೆ. ಐಎನ್‌ಎಸ್ ಖುಕ್ರಿ ತನ್ನ ಸೇವೆಯ ಸಮಯದಲ್ಲಿ ಪಶ್ಚಿಮ ಮತ್ತು ಪೂರ್ವ ಎರಡೂ ನೌಕಾಪಡೆಗಳ ಭಾಗವಾಗಿತ್ತು. ನಿರ್ಗಮಿಸಿದ ಹಡಗನ್ನು ಹಸ್ತಾಂತರಿಸಲು ಬುಧವಾರ ದಿಯುನಲ್ಲಿ ಸಮಾರಂಭವನ್ನು ನಡೆಸ ಲಾಯಿತು ಎಂದು ಭಾರತೀಯ ನೌಕಾಪಡೆ ಹೇಳಿದೆ. ಈ ಸಂದರ್ಭ ರಿಯರ್ ಅಡ್ಮಿರಲ್ ಅಜಯ್ ವಿನಯ್ ಭಾವೆ, ಫ್ಲಾಗ್ ಆಫೀಸರ್ ಡಾಕ್ಟಿçನ್ ಮತ್ತು ಕಾನ್ಸೆಪ್ಸ್÷್ಟ, ಡಿಎನ್‌ಎಚ್‌ಡಿಡಿ (ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು) ಮತ್ತು ಲಕ್ಷದ್ವೀಪ್‌ನ ಕೇಂದ್ರಾಡಳಿತ ಪ್ರದೇಶದ ಪ್ರಫುಲ್ ಪಟೇಲ್ ಅವರಿಗೆ ಔಪಚಾರಿಕವಾಗಿ ಹಡಗನ್ನು ಹಸ್ತಾಂತರಿಸಿದರು. ಸೇವೆೆಯಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ ಐಎನ್‌ಎಸ್ ಖುಕ್ರಿಯನ್ನು ದಿಯು ದಮನ್ ಆಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಗಿದ್ದು, ಇದೀಗ ದಿಯು ದಮನ್ ಸರ್ಕಾರ ಈ ಐತಿಹಾಸಿಕ ನೌಕೆಯನ್ನು ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಲಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ೩೨ ವರ್ಷಗಳ ಸೇವೆಯ ನಂತರ, ಐಎನ್‌ಎಸ್ ಖುಕ್ರಿಯನ್ನು ಸೇವೆಯಿಂದ ನಿವೃತ್ತಿಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದಾಗ್ಯೂ, ದಿಯು ಆಡಳಿತವು ಜನವರಿ ೨೬ ರಂದು ಔಪಚಾರಿಕವಾಗಿ ಖುಕ್ರಿಯನ್ನು ತನ್ನ ಸುಪರ್ದಿಗೆ ಪಡೆದುಕೊಂಡಿತ್ತು. ಐಎನ್‌ಎಸ್ ಖುಕ್ರಿಯನ್ನು ಸಾರ್ವಜನಿಕ ವೀಕ್ಷಣೆಗೆ ಪ್ರದರ್ಶನಕ್ಕೆ ಇಡಲಾಗುವುದು ಎಂದು ದಿಯು ಆಡಳಿತ ಘೋಷಿಸಿದೆ.ಈ ಕುರಿತು ಮಾತನಾಡಿರುವ ದಿಯು ಎಂದು ಜಿಲ್ಲಾಧಿಕಾರಿ ಸಲೋನಿ ರೈ, ದೇಶೀಯವಾಗಿ ನಿರ್ಮಿಸಲಾದ ಮೊದಲ ಕ್ಷಿಪಣಿ ಕಾರ್ವೆಟ್ ಅನ್ನು ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.