ಮಡಿಕೇರಿ: ಇಲ್ಲಿನ ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ರಾಷ್ಟಿçÃಯ ಕ್ರೀಡಾಪಟು ಸುಕುಮಾರ್ ನೆರವೇರಿಸಿದರು.

ಸಮಾರಂಭದಲ್ಲಿ ಮೂಡಾ ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ಮಡಿಕೇರಿ ರೋಟರಿ ಕ್ಲಬ್‌ನ ಸದಸ್ಯರು ಮತ್ತು ಶಾಲಾ ಆಡಳಿತ ಮಂಡಳಿ ಸದಸ್ಯ ಅನಿಲ್ ಕೃಷ್ಣಾನೀ, ವಿದ್ಯಾಸಂಸ್ಥೆಯ ಮೇನೇಜಿಂಗ್ ಟ್ರಸ್ಟಿ ಸಚ್ಚಿನ್ ವಾಸುದೇವ್, ಆಡಳಿತ ಮಂಡಳಿ ನಿರ್ದೇಶಕ ದೇವರಾಜ್, ಸಂಚನ್ ವರುಣ್ ಬೆಂಗಳೂರು ಮತ್ತು ಪ್ರಾಂಶುಪಾಲ ಮಂದಣ್ಣ ಇವರುಗಳು ಉಪಸ್ಥಿತರಿದ್ದರು. ಶಿಕ್ಷಕಿ ಮೀರಾ ಸ್ವಾಗತಿಸಿದರು. ಕನ್ನಡ ಮಾಧ್ಯಮ ಮುಖ್ಯೋಪಾಧ್ಯಾಯ ವೆಂಕಟೇಶ್ ಪೂಜಾರ್ ದಿನದ ಮಹತ್ವದ ಕುರಿತು ಮಾತನಾಡಿದರು. ಶಿಕ್ಷಕಿ ಕಾಂತಿ ಪೈ ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತು ತಿಳಿಸಿದರು. ಉಪನ್ಯಾಸಕಿ ಅನಿಸತ್ತ್ ನಿರೂಪಿಸಿ, ತಾಜಿನಾ ಫಾತಿಮಾ ವಂದಿಸಿದರು.ವೀರಾಜಪೇಟೆ: ಭಾರತದ ಸಂವಿಧಾನವು ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವೀರಾಜಪೇಟೆ ಕ್ಷೇತ್ರ ಸಂಪನ್ಮೂಲ ಸಂಯೋಜನಾಧಿಕಾರಿ ವನಜಾಕ್ಷಿ ಹೇಳಿದರು.

ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ‘ಭಾರತದ ಪ್ರಜೆಗಳಾದ ನಾವು’ ವಿಷಯದ ಬಗ್ಗೆ ಅವರು ಉಪನ್ಯಾಸ ನೀಡಿದರು. ಸೈಂಟ್ ಆನ್ಸ್ ವಿದ್ಯಾಸಂಸ್ಥೆಗಳ ಮುಖ್ಯಸ್ಥ ರೆ.ಫಾ. ಮದಲೈಮುತ್ತು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರೆ.ಫಾ. ರೋನಿ ರವಿಕುಮಾರ್ ವಹಿಸಿ ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಯೋಜನಾಧಿಕಾರಿ ತೃಪ್ತಿ ಬೋಪಣ್ಣ ಸಂವಿಧಾನದ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಅರ್ಜುನ್ ಹೆಚ್.ಆರ್. ಪ್ರಾಸ್ತಾವಿಕ ನುಡಿಯಾಡಿದರು. ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಎನ್‌ಎಸ್‌ಎಸ್ ಘಟಕದ ಎಲ್ಲಾ ಸ್ವಯಂ ಸೇವಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಗಣರಾಜ್ಯೋತ್ಸವ ಆಚರಣೆಯಲ್ಲಿ ವೀರಚಕ್ರ ಪುರಸ್ಕೃತ ನಿವೃತ್ತ ಮೇಜರ್ ಜನರಲ್ ಕುಪ್ಪಂಡ ಪಿ. ನಂಜಪ್ಪ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ದೇಶಪ್ರೇಮವನ್ನು ಬೆಳೆಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ ಮಾತನಾಡಿ, ನಾವು ನಮ್ಮ ಸೈನಿಕರಿಗೆ ಚಿರಋಣಿಯಾಗಿರಬೇಕು. ಪ್ರತಿಯೊಬ್ಬ ಪ್ರಜೆಯೂ ಕೂಡ ಸಂವಿಧಾನಕ್ಕೆ ಗೌರವ ನೀಡಬೇಕೆಂದರು. ಈ ಸಂದರ್ಭ ನಿವೃತ್ತ ಪ್ಯಾರಾ ಟ್ರೂಪರ್ ಬೊಟ್ಟಂಗಡ ಜಪ್ಪು ಜೋಯಪ್ಪ, ನಿವೃತ್ತ ಸೇನಾಧಿಕಾರಿಗಳಾದ ಮಚ್ಚಮಾಡ ಕೆ. ರಮೇಶ್, ಟಿ.ಪಿ. ರಮೇಶ್, ಲವ ಪೊನ್ನಪ್ಪ, ಮಿಚೆಲ್ ಮೆನೇಜಸ್, ಕೆ.ಪಿ. ಸೋಮಣ್ಣ, ಬಲ್ಯಮೀದೇರೀರ ಸಂಪತ್, ಬೊಜ್ಜಂಗಡ ಸುನಿಲ್, ಬಲ್ಯಮಿದೇರೀರ ಪ್ರಕಾಶ್, ಬೊಜ್ಜಂಗಡ ತಿಮ್ಮಯ್ಯ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಸದಸ್ಯೆ ಎಂ.ಪಿ. ಭವಾನಿ, ವಿಶಾಲಾಕ್ಷಿ ವೆಂಕಟೇಶ್, ಕಾವೇರಿ ಕಾಲೇಜು ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಪ್ರೊ. ಟಿ.ಎಂ. ದೇವಯ್ಯ, ವಾಣಿ ಚಂಗಪ್ಪ, ಮನು ನಂಜಪ್ಪ, ಜೋಯಪ್ಪ, ಪೂಣಚ್ಚ, ಎನ್‌ಸಿಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಎಂ.ಆರ್. ಅಕ್ರಂ, ಲೆಫ್ಟಿನೆಂಟ್ ಐ.ಡಿ. ಲೇಪಾಕ್ಷಿ, ಎನ್‌ಎಸ್‌ಎಸ್ ಅಧಿಕಾರಿಗಳಾದ ಎಂ.ಎನ್. ವನಿತ್‌ಕುಮಾರ್, ಎನ್.ಪಿ. ರೀತಾ, ರೋವರ್ಸ್ ರೇಂಜರ್ಸ್ ಅಧಿಕಾರಿ ಸೀಮಾ, ಯುವ ರೆಡ್‌ಕ್ರಾಸ್ ಘಟಕದ ಅಧಿಕಾರಿ ಕುಶಾಲಪ್ಪ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕಾವೇರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಸ್ವಾಗತಿಸಿದರೆ, ಉಪ ಪ್ರಾಂಶುಪಾಲ ಡಾ. ಎ.ಎಸ್. ಪೂವಮ್ಮ ವಂದಿಸಿದರು.ಶನಿವಾರಸAತೆ: ಇಲ್ಲಿನ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಿತಿಯ ಹಿರಿಯ ಮುಖಂಕೂಡಿಗೆ: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಧ್ವಜಾರೋಹಣವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ನೆರವೇರಿಸಿದರು. ದಿನದ ಮಹತ್ವದ ಬಗ್ಗೆ ಕಾಲೇಜು ಪ್ರಾಂಶುಪಾಲ ಡಾ. ಬಸಪ್ಪ ಮಾತನಾಡಿದರು.

ಈ ಸಂದರ್ಭ ಕಾಲೇಜಿನ ಉಪನ್ಯಾಸಕರಾದ ನಾಗಪ್ಪ, ಸತೀಶ್, ರಮೇಶ್, ಹೇಮರಾಜ್, ಕಾವೇರಮ್ಮ ಸೂಸೀ ತಂಗಚನ್, ಲಿನೆಟ್, ಪಲ್ಲವಿ, ಪಾವನ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.ನಾಪೋಕ್ಲು: ನಾಪೋಕ್ಲುವಿನ ನಿವೃತ್ತ ಯೋಧರು ಹಾಗೂ ಸಹಕಾರ ಮಹಿಳಾ ಸಮಾಜದ ಸಹಯೋಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಯೋಧರ ಸಂಘದ ಉಪಾಧ್ಯಕ್ಷ ಕೊಂಡೀರ ನಾಣಯ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಆಗಿನ ರಾಷ್ಟçಪತಿ ಬಾಬು ರಾಜೇಂದ್ರ ಪ್ರಸಾದ್, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅಮೇರಿಕಾ, ಇಂಗ್ಲೆAಡ್ ಮುಂತಾದ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ನಮ್ಮ ಸಂವಿಧಾನವನ್ನು ರಚಿಸಿದರು. ಇಂತಹ ಅಮೂಲ್ಯ ಸಂವಿಧಾನವನ್ನು ಗೌರವಿಸುವುದು ಹಾಗೂ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಸ್ವಾತಂತ್ರö್ಯ ಹೋರಾಟಗಾರರನ್ನು ನಾವು ಸ್ಮರಿಸಿಕೊಳ್ಳಬೇಕು ಎಂದರು.

ಮಹಿಳಾ ಸಮಾಜದ ನಿರ್ದೇಶಕಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ನಿವೃತ್ತ ಯೋಧ ಕಂಬೆಯAಡ ಅಪ್ಪಣ್ಣ, ಕೇಟೋಳಿರ ಅಚ್ಚಪ್ಪ, ಕರೀಂ, ಮಹಿಳಾ ಸಮಾಜದ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯರು ಹಾಜರಿದ್ದರು.ಚೆಟ್ಟಳ್ಳಿ: ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗಣರಾಜ್ಯೋತ್ಸವ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯನ್ನು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರ ನೇತೃತ್ವದಲ್ಲಿ ನಡೆಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಲ್ಲಾರಂಡ ಮಣಿ ಉತ್ತಪ್ಪ, ಇಡೀ ವಿಶ್ವದಲ್ಲೇ ಅತೀ ದೊಡ್ಡ ಲಿಖಿತ ಸಂವಿಧಾನ ಭಾರತದ್ದು, ಪ್ರತಿಯೊಬ್ಬ ಪ್ರಜೆಯೂ ಭಾರತ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶ ಕಲ್ಪಿಸಿರುವುದು ಭಾರತ ದೇಶವನ್ನು ಬೇರೆ ದೇಶಗಳಿಗಿಂತ ಭಿನ್ನವಾಗಿ ಕಾಣಿಸುವಂತೆ ಮಾಡಿದೆ.

ದೇಶದಲ್ಲಿ ಹುಟ್ಟಿದ ಪುಟ್ಟ ಮಗುವಿನಿಂದ ಹಿಡಿದು, ಬಡ, ಶ್ರೀಮಂತ ಭೇದವಿಲ್ಲದೆ ಎಲ್ಲರಿಗೂ ನಮ್ಮ ಸಂವಿಧಾನ ಎಲ್ಲಾ ಅವಕಾಶವನ್ನು ನೀಡಿದೆ ಎಂದು ಮಣಿ ಉತ್ತಪ್ಪ ಹೇಳಿದರು. ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಮಣಿ ಉತ್ತಪ್ಪ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಭಾರತ ಸೈನ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸುಭಾಷ್ ಚಂದ್ರ ಬೋಸ್ ಅವರನ್ನು ನಮ್ಮ ಇಂದಿನ ಯುವ ಸಮೂಹ ಮಾದರಿಯಾಗಿಸಿ ಜೀವನದಲ್ಲಿ ಮುಂದೆ ಬರಬೇಕೆಂದರು. ಈ ಸಂದರ್ಭ ಕೃಷಿ ಪತ್ತಿನ ಸಹಕಾರ ಸಂಘದ, ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.ಡ ಎಂ.ಎA. ಸಿದ್ದಯ್ಯ ಮೈಲಾದಪುರರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಮಿತಿ ಅಧ್ಯಕ್ಷ ಜೆ.ಆರ್. ಪಾಲಾಕ್ಷ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಮಿತಿ ಉಪಾಧ್ಯಕ್ಷ ಎಸ್.ಜೆ. ರಾಜಪ್ಪ, ಸದಸ್ಯರುಗಳಾದ ಶೃತಿ ದಿನೇಶ್, ಎಂ.ಡಿ. ದೇವರಾಜ್ ಮೆಣಸ, ದಿನೇಶ್ ಬೆಟ್ಟದಳ್ಳಿ, ಎಸ್.ಆರ್. ಉಮೇಶ್‌ಕುಮಾರ್, ಮೋಹನ, ಮಂಜಯ್ಯ ಪೈಂಟರ್, ರಾಜು ಗುಂಡೂರಾವ್ ಬಡಾವಣೆ, ಹೇಮಂತ್ ಮಾದ್ರೆ, ಮಂಜು ಸುಳುಗಳಲೆ ಇತರ ಕಾರ್ಯಕರ್ತರು ಭಾಗವಹಿಸಿದ್ದರು.ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಹ್ಯಾಂಡ್‌ಪೋಸ್ಟ್ನಲ್ಲಿರುವ ತಜಲ್ಲಿಯಾತ್ ಅರಬಿಕ್ ಮದ್ರಸದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಜುಮ್ಮಾ ಮಸ್ಜಿದ್ ಅಧ್ಯಕ್ಷ ಡಿ.ಎ. ಸುಲೈಮಾನ್ ಧ್ವಜಾರೋಹಣ ನೆರವೇರಿಸಿದರು.

ಧರ್ಮಗುರು ಹಾರಿಸ್ ಬಾಖವಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಿಕ್ಷಕರಾದ ಜಹೀರ್ ನಿಜಾಮಿ, ಜುಮ್ಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಎಂ.ಎA. ಹನೀಫ್ ಮಾತನಾಡಿ, ದಿನದ ಮಹತ್ವ ಹಾಗೂ ಸಂವಿಧಾನದ ಬಗ್ಗೆ ತಿಳಿಸಿದರು.

ಮದ್ರಸದ ಮುಖ್ಯ ಶಿಕ್ಷಕ ರಜಾಕ್ ಫೈಜಿ, ಮಸ್ಜಿದ್ ಉಪಾಧ್ಯಕ್ಷ ಇಬ್ರಾಹಿಂ ಮಲ್ಲಳ್ಳಿ, ಕಾರ್ಯದರ್ಶಿ ರಫೀಕ್, ಸದಸ್ಯ ಇಸ್ಮಾಯಿಲ್ ಇತರರು ಹಾಜರಿದ್ದರು.ಶ್ರೀ ಬೊಟ್ಲಪ್ಪ ಯುವಕ ಸಂಘ

ಕಡಗದಾಳು: ಶ್ರೀ ಬೊಟ್ಲಪ್ಪ ಯುವಕ ಸಂಘದ ವತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಯುವಕ ಸಂಘದ ಅಧ್ಯಕ್ಷ ಪಿ.ಎಂ. ಸುರೇಶ್ ನೆರವೇರಿಸಿದರು.

ಯುವಕ ಸಂಘದ ಖಜಾಂಚಿ ಅವಿನಾಶ್ ಮತ್ತಿತರರಿದ್ದರು. ಕಾರ್ಯಕ್ರಮವನ್ನು ಯುವಕ ಸಂಘದ ಕಾರ್ಯದರ್ಶಿ ಆದಿತ್ಯ ಕೆ.ಬಿ. ನಿರೂಪಿಸಿದರು. ಅರ್ಜುನ್ ಕೆ.ಬಿ. ವಂದಿಸಿದರು.ಕೂಡಿಗೆ: ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ನಿರ್ದೇಶಕ ಬಿ.ವಿ. ಅರುಣ್‌ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯ ಹುದುಗೂರು ರವಿ ಅವರು ಆಗಮಿಸಿ ದಿನದ ಮಹತ್ವ ಕುರಿತು ಮಾತನಾಡಿದರು.

ಈ ಸಂದರ್ಭ ಸಿಆರ್‌ಪಿಎಫ್ ಹಾಗೂ ದಕ್ಷಿಣ ಆಫ್ರಿಕಾದ ಶಾಂತಿಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ ಸದ್ಗುರು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿ ಚಂದ್ರಮತಿ ಅವರನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಮುಖ್ಯೋಪಾಧ್ಯಾಯ ದುರ್ಗೇಶ್ ಸ್ವಾಗತಿಸಿದರು. ಶಿಕ್ಷಕ ಎ.ಪಿ. ಸೋಮಯ್ಯ ವಂದಿಸಿದರು. ಅಧ್ಯಾಪಕ ವೃಂದದ ಸುಲೋಚನಾ, ಎಸ್.ಎಸ್. ಶಿವಪ್ರಸಾದ್, ಎ.ಪಿ. ಸೋಮಯ್ಯ, ಕುಸುಮ, ಹೇಮಲತಾ, ಸುರೇಶ್, ಮೋಹನೇಶ್ವರಿ ಉಪಸ್ಥಿತರಿದ್ದರು.ಶನಿವಾರಸಂತೆ: ಶನಿವಾರಸಂತೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಶೇಖರ್ ಅವರು ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಎಸ್.ಆರ್. ಮಧು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ, ಕಾರ್ಯದರ್ಶಿ ತಮ್ಮಯ್ಯಾಚಾರ್, ಲೆಕ್ಕ ಸಹಾಯಕ ವಸಂತ್, ಕಂಪ್ಯೂಟರ್ ನಿರ್ವಾಹಕಿಯರಾದ ಫೌಜಿಯಾ, ಲೀಲಾ, ಸಿಬ್ಬಂದಿ ಧರ್ಮರಾಜ್ ಹಾಗೂ ಪೌರ ಕಾರ್ಮಿಕರುಗಳು ಹಾಜರಿದ್ದರು.