ಮಡಿಕೇರಿ, ಜ. ೨೮: ‘ಕೂರ್ಗ್ ಬೈ ರೇಸ್’ ಮತ್ತು ಕೋವಿ ಹಕ್ಕಿನ ಕುರಿತು ತಪ್ಪಾಗಿ ಅರ್ಥೈಸಲಾಗುತ್ತಿದೆ. ಇದನ್ನು ವಿರೋಧಿಸಿ ಹಾಗೂ ಸಂವಿಧಾನದ ೨೫ ಮತ್ತು ೨೬ ನೇ ವಿಧಿಯಡಿಯಲ್ಲಿ ಕೊಡವ ಜನಾಂಗ ಮತ್ತು ಅವರ ಧಾರ್ಮಿಕ ‘ಸಂಸ್ಕಾರ’ ಗನ್‌ಗೆ ಶಾಸನಬದ್ಧ ಸ್ಥಾನಮಾನವನ್ನು ನೀಡಬೇಕೆಂದು ಒತ್ತಾಯಿಸಿ ಮಡಿಕೇರಿಯಲ್ಲಿ ಫೆ.೭ ರಂದು ಪ್ರತಿಭಟನಾ ಸಭೆ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದರು.

ಮುಂದಿನ ದಿನಗಳಲ್ಲಿ ಕಾನೂನಿನ ಚೌಕಟ್ಟಿನಡಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಿಎನ್‌ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಅರೆಯಡ ಗಿರೀಶ್, ಮಂದಪAಡ ಮನೋಜ್ ಹಾಗೂ ಕೂಪದಿರ ಸಾಬು ಉಪಸ್ಥಿತರಿದ್ದರು.