ಶ್ರೀಮಂಗಲ, ಜ. ೨೮: ಕೊಡಗು ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳು ಹಾಗೂ ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಅವುಗಳನ್ನು ತಡೆಗಟ್ಟಲು ತಕ್ಷಣದ ಕ್ರಮಗಳನ್ನು ಮತ್ತು ದೀರ್ಘಕಾಲಿಕ ಯೋಜನೆಗಳ ಮೂಲಕ ಶಾಶ್ವತವಾಗಿ ತಡೆಗಟ್ಟಲು ಕಾರ್ಯಯೋಜನೆ ಕೈಗೊಳ್ಳಲಾಗುವುದು. ಶಾಶ್ವತ ಯೋಜನೆ ರೂಪಿಸಲು ಅನುದಾನದ ಕೊರತೆ ಉಂಟಾಗುತ್ತಿದೆ. ಅದಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಯೋಜನೆ ರೂಪಿಸಲಾಗುವುದು ಎಂದು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿ.ಸಿ.ಸಿ.ಎಫ್) ಮತ್ತು ಅರಣ್ಯ ಇಲಾಖೆಯ ಹೆಚ್.ಓ.ಎಫ್.ಎಫ್ ಸಂಜಯ್ ಮೋಹನ್ ಅವರು ಭÀರವಸೆ ನೀಡಿದರು.
ಮೈಸೂರಿನ ಅರಣ್ಯ ಭವನದಲ್ಲಿ ಕೊಡಗು ಜಿಲ್ಲೆಯಲ್ಲಿ ವನ್ಯಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೊಡಗು ಸಂರಕ್ಷಣಾ ವೇದಿಕೆ ಸಲ್ಲಿಸಿದ ಮನವಿಗೆ ಸ್ಪಂದಿಸಿ ತಮ್ಮ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ಕೊಡಗು ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಹಿಂದೆ ಹುಲಿ ಸೆರೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದ್ದೆವು. ಈಗ ಎರಡು, ಮೂರು ಜಾನುವಾರುಗಳ ಮೇಲೆ ಒಂದೇ ಸ್ಥಳದಲ್ಲಿ ಒಂದೇ ಹುಲಿ ದಾಳಿ ನಡೆಸಿರುವ ಘಟನೆ ನಡೆಯುತ್ತಿದ್ದಂತೆ, ಹುಲಿ ಸೆರೆಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುತ್ತಿದ್ದೇವೆ. ಎಲ್ಲಾ ಕಾಡಾನೆಗಳಿಂದ ಸಮಸ್ಯೆಯಾಗಿಲ್ಲ. ಜಿಲ್ಲೆಯಲ್ಲಿ ೭೦ರಿಂದ ೯೦ ಕಾಡಾನೆಗಳು ಅರಣ್ಯದಿಂದ ಗ್ರಾಮಕ್ಕೆ ನುಗ್ಗುತ್ತಿದ್ದು, ಅವುಗಳ ಬಗ್ಗೆ ನಿಗಾವಹಿಸಲಾಗುತ್ತಿದೆ ಎಂದರು. ಉಪಟಳ ನೀಡುತ್ತಿರುವ ಐದು ಕಾಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರಿಸಲು ಆದೇಶಿಸಲಾಗಿದ್ದು, ಅದರಲ್ಲಿ ಒಂದನ್ನು ಮಾತ್ರ ಹಿಡಿದು ಸ್ಥಳಾಂತರಿಸಲಾಗಿದೆ ಎಂಬ ಮನವಿಯ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಹಾಸನ ಜಿಲ್ಲೆಯಲ್ಲಿ ಎಸ್.ಎಂ.ಎಸ್ ಅಲರ್ಟ್ ಸಿಸ್ಟಮ್ ತುಂಬಾ ಅನುಕೂಲವಾಗಿದ್ದು, ಅದನ್ನು ಕೊಡಗಿನಲ್ಲಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುವುದು. ವನ್ಯ ಪ್ರಾಣಿಗಳಿಗೆ ಆಹಾರ ಅಲ್ಲದೆ ಅರಣ್ಯವನ್ನು ವ್ಯಾಪಿಸಿಕೊಳ್ಳುತ್ತಿರುವ ಲಂಟನ ಪ್ರಭೇದದ ಗಿಡಗಳನ್ನು ತೆಗೆದು ಹುಲ್ಲು ಮತ್ತು ಬಿದಿರು ಹಾಕಲು ಕ್ರಮ. ಇದರೊಂದಿಗೆ ವನ್ಯ ಪ್ರಾಣಿಗಳು ನುಸುಳು ತಡೆಗೆ ಕಂದಕಗಳನ್ನು ಹೆಚ್ಚಾಗಿ ನಿರ್ಮಿಸಿ ದುರಸ್ತಿಪಡಿಸಲು ಅಗತ್ಯವಿರುವೆಡೆಗೆ ಟೆಂಡರ್ ಕರೆದು ಯೋಜನೆ ರೂಪಿಸಲಾಗುವುದು ಎಂದು ಅವರು ತಿಳಿಸಿದರು.
ಇದಕ್ಕೂ ಮೊದಲು ಮಾತನಾಡಿದ ಕೊಡಗು ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಚೊಟ್ಟೆಕ್ಮಾಡ ರಾಜೀವ್ ಬೋಪಯ್ಯ ಅವರು; ವನ್ಯ ಪ್ರಾಣಿಗಳ ಹಾವಳಿಯಿಂದ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗದೆ ಬೆಳೆಗಾರರು ನಷ್ಟ ಅನುಭವಿಸುತ್ತಾ ಅಸಹಾಯಕರಾಗಿದ್ದಾರೆ. ಬೆಳೆ ನಷ್ಟಕ್ಕೆ ಪರಿಹಾರ ನೀಡುವ
(ಮೊದಲ ಪುಟದಿಂದ) ಬದಲು ಶಾಶ್ವತ ಯೋಜನೆಯನ್ನು ರೂಪಿಸಿ ಕಂದಕಗಳನ್ನು ಅಗಲ ಮಾಡಿ ದುರಸ್ತಿಪಡಿಸಲು ತಾಲೂಕಿಗೆ ಒಂದರAತೆ ಅರಣ್ಯ ಇಲಾಖೆಯೇ ಸ್ವಂತ ಹಿಟಾಚಿಯನ್ನು ಖರೀದಿಸಿ ಇಟ್ಟುಕೊಳ್ಳುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಎಲ್ಲಾ ಅಧಿಕಾರಿಗಳು, ಸಂಘಸAಸ್ಥೆಗಳು, ಜನಪ್ರತಿನಿಧಿಗಳ ಸಭೆ ಕರೆದು ಶಾಶ್ವತ ಯೋಜನೆ ರೂಪಿಸಲು ಸಲಹೆ ನೀಡಿದರು. ಸರ್ಕಾರ ಅಗತ್ಯವಾದ ಅನುದಾನವನ್ನು ಒದಗಿಸಬೇಕು. ಇದಕ್ಕಾಗಿ ಅರಣ್ಯ ಇಲಾಖೆಯೂ ಸಹ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಬೇಕೆಂದು ಹೇಳಿದರು.
ಕೊಡಗು ಸಂರಕ್ಷಣಾ ವೇದಿಕೆಯ ಸಂಚಾಲಕ ಕರ್ನಲ್ ಚೆಪುö್ಪಡೀರ ಪಿ. ಮುತ್ತಣ್ಣ ಮಾತನಾಡಿ ಕರ್ನಾಟಕ ಗಡಿಯ ಕುಟ್ಟದಲ್ಲಿ ಖಾಸಗಿ ಸಂಸ್ಥೆಗೆ ಸೇರಿದ ಕಾಫಿ ತೋಟ ಅರಣ್ಯ ಜಾಗವನ್ನು ಅತಿಕ್ರಮಣ ಮಾಡಿಕೊಂಡಿರುವ ಹಿನ್ನೆಲೆ ಬ್ರಹ್ಮಗಿರಿ, ನಾಗರಹೊಳೆ (ಬೇಗೂರು ಬ್ರಹ್ಮಗಿರಿ) ವನ್ಯಪ್ರಾಣಿಗಳ ಕಾರಿಡಾರ್ಗೆ ತಡೆಯುಂಟಾಗಿದೆ. ಹಾಗೆಯೇ ಉತ್ತರ ಕೊಡಗಿನಲ್ಲಿ ಮಡಿಕೇರಿ ವಿಭಾಗದಲ್ಲಿ ರಬ್ಬರ್ ಎಸ್ಟೇಟ್ಗಳು ವನ್ಯಪ್ರಾಣಿಗಳ ಕಾರಿಡಾರ್ಗಳನ್ನು ಅತಿಕ್ರಮಿಸಿಕೊಂಡಿದ್ದು, ಇವುಗಳನ್ನು ಸರ್ಕಾರ ತಮ್ಮ ವಶಕ್ಕೆ ತೆಗೆದುಕೊಂಡರೆ ವನ್ಯಪ್ರಾಣಿಗಳ ಸಂಚಾರದ ಕಾರಿಡಾರ್ ವಿಸ್ತಾರವಾಗಲಿದೆ ಎಂದರು. ಇದರಿಂದ ವನ್ಯಪ್ರಾಣಿಗಳ ಸಂಘರ್ಷ ಕಡಿಮೆಯಾಗುತ್ತದೆ ಎಂದು ಸಲಹೆ ನೀಡಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಾಚಿಮಾಡ ಎಂ. ರವೀಂದ್ರ ಮಾತನಾಡಿ ಅದಕ್ಕೆ ಅಗತ್ಯವಾದ ಅನುದಾನವನ್ನು ಜಿಲ್ಲೆಯ ಸಂಸದರು ಮತ್ತು ಶಾಸಕರುಗಳು ಮುಂದಿನ ಬಜೆಟ್ನಲ್ಲಿಯೇ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.
ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಉಪಾಧ್ಯಕ್ಷೆ ಮಾಂಗೇರ ಪದ್ಮಿನಿ ಪೊನ್ನಪ್ಪ ಕೊಡಗು ಜಿಲ್ಲೆಗೆ ಪ್ರತ್ಯೇಕವಾದ ಮುಖ್ಯ ಸಂರಕ್ಷಣಾಧಿಕಾರಿ ನೇಮಿಸಬೇಕು. ಅರಣ್ಯದೊಳಗೆ ನೀರು ಹಾಗೂ ಆಹಾರವನ್ನು ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಕೊಡಗು ಬೆಳೆಗಾರರ ಒಕ್ಕೂಟದ ತಾಂತ್ರಿಕ ಸಲಹೆಗಾರ ಚೆಪುö್ಪಡೀರ ಶರಿಸುಬ್ಬಯ್ಯ ಮಾತನಾಡಿ ಜಿಲ್ಲೆಯ ಅರಣ್ಯ ಸರಹದ್ದು ಸುಮಾರು ೨೮೨ ಕಿ.ಮೀ ಇದ್ದು, ಇಲ್ಲಿಗೆ ಕಂದಕ ನಿರ್ಮಿಸುವಂತೆ ಸಲಹೆ ನೀಡಿದರು.
ಕೊಡಗು ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಣ್ಣೀರ ಹರೀಶ್ ಮಾದಪ್ಪ ಮಾತನಾಡಿ ಅರಣ್ಯದ ಸರಹದ್ದಿನಲ್ಲಿ ನೀರಾವರಿ ಚಾನೆಲ್
ಮಾದರಿಯಲ್ಲಿ ಕಾಂಕ್ರಿಟ್ ತಡೆಗೋಡೆ ನಿರ್ಮಿಸಿ ಕನಿಷ್ಟ ೧೫ ಅಡಿ ಆಳ, ೨೦ ಅಡಿ ಅಗಲದ ಕಂದಕ ನಿರ್ಮಿಸುವುದರಿಂದ ಮಣ್ಣುಕುಸಿಯುವುದು ಹಾಗೂ ಕಾಡು ಬೆಳೆಯುವುದನ್ನು ತಡೆಗಟ್ಟಿ ದುರಸ್ತಿ ಕಾರ್ಯ ಇಲ್ಲದೇ ಕಂದಕ ನಿರ್ಮಿಸಿದ್ದಲ್ಲಿ ವನ್ಯಪ್ರಾಣಿಗಳು ನುಸುಳಲು ಸಾಧ್ಯವಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಣ್ಣ ಬೆಳೆಗಾರರ ಸಂಘದ ಅಧ್ಯಕ್ಷ ಚೇರಂಡ ನಂದಸುಬ್ಬಯ್ಯ, ಜಬ್ಭೂಮಿ ಸಂಘಟನೆಯ ಖಜಾಂಚಿ ಗಣೇಶ್ ಅಯ್ಯಣ್ಣ, ಬೆಳೆಗಾರ ಮಲ್ಲಮಾಡ ಪ್ರಭು ಪೂಣಚ್ಚ ತಮ್ಮ ಸಲಹೆ ನೀಡಿದರು.
ಈ ಸಂದರ್ಭ ಕೊಡಗು ಸಂರಕ್ಷಣಾ ವೇದಿಕೆಯ ಪ್ರಮುಖರಾದ ಮಲ್ಲಮಾಡ ಪ್ರಭುಪೂಣಚ್ಚ, ಕೊಡಗು ಜಿಲ್ಲೆಯ ಅರಣ್ಯ ಇಲಾಖೆಯ ವಾರ್ಡನ್ ಹಾಗೂ ಕೊಡಗು ವನ್ಯಜೀವಿ ಸಂಘದ ಉಪಾಧ್ಯಕ್ಷ ಕುಂಞAಗಡ ಬೋಸ್ ಮಾದಪ್ಪ, ಬಲ್ಲಚಂಡ ರಾಯ್ ಬೋಪಣ್ಣ, ಅರಣ್ಯ ಇಲಾಖೆಯ ಜಗತ್ರಾಮ್, ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಲಾಲ್, ಮಡಿಕೇರಿ ವೃತ್ತ ಡಾ. ಡಿ. ಶಂಕರ್, ಮೈಸೂರಿನ ಡಿ.ಸಿ.ಎಫ್ ಕೆ. ಕಮಲ ಮತ್ತು ಕರಿಕಾಳನ್, ನಾಗರಹೊಳೆ ಹುಲಿ ಸಂರಕ್ಷಣೆ ಯೋಜನೆಯ ನಿರ್ದೇಶಕ ಮಹೇಶ್ಕುಮಾರ್, ಹುಣಸೂರು ಡಿ.ಸಿ.ಎಫ್ ಎಲ್. ಪ್ರಶಾಂತ್ಕುಮಾರ್, ಮಡಿಕೇರಿ ವನ್ಯ ಜೀವಿ ಡಿ.ಸಿ.ಎಫ್ ಶಿವರಾಂ ಬಾಬು, ಡಬ್ಲು.ಡಬ್ಲು.ಎಫ್ ವನ್ಯಪ್ರಾಣಿ ಸಂಶೋಧಕ ಡಿ. ಭೂಮಿನಾಥನ್, ಡಬ್ಲು.ಡಬ್ಲು.ಎಫ್ನ ತಂಡ ಪ್ರಮುಖರಾದ ಸಂಕೇತ್ ಭಾಲೆ, ಗಣೇಶ್ ಪ್ರಸಾದ್, ವೀರಾಜಪೇಟೆ ಡಿ.ಸಿ.ಎಫ್ ಚಕ್ರಪಾಣಿ, ಮಡಿಕೇರಿ ವನ್ಯಜೀವಿ ಎ.ಸಿ.ಎಫ್ ದಯಾನಂದ, ಸೋಮವಾರಪೇಟೆ ವಿಭಾಗದ ಎ.ಸಿ.ಎಫ್ ಕೆ.ಎ. ನೆಹರು, ಕುಶಾಲನಗರ ಆರ್.ಎಫ್.ಓ ಅನನ್ಯಕುಮಾರ್ ಹಾಜರಿದ್ದರು.