ನಾಳೆಯಿಂದ ನೈಟ್ ಕರ್ಫ್ಯೂ ರದ್ದು: ಶಾಲೆಗಳು ಪುನರಾರಂಭ

ಬೆAಗಳೂರು, ಜ. ೨೯: ಕೋವಿಡ್ ಮೂರನೇ ಅಲೆಯ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹಾಕಿದ್ದ ರಾಜ್ಯ ಸರ್ಕಾರ ಇದೀಗ ಕೊರೊನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ತೆಗೆದು ಹಾಕಿದೆ. ರಾಜ್ಯದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂವನ್ನು ತಾ. ೩೧ ರಿಂದ ತೆಗೆದುಹಾಕಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಗ್ಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಟೇಲ್, ರೆಸ್ಟೋರೆಂಟ್, ಪಬ್ ಬಾರ್‌ಗಳಿಗೆ ಸಂಪೂರ್ಣವಾಗಿ ತೆರೆಯಲು ಅನುಮತಿ ನೀಡಲಾಗಿದೆ. ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ ೩೦೦ ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ ೨೦೦ ಜನರಿಗೆ ಅವಕಾಶ ಎಂದು ಹೇಳಿದರು. ಇನ್ನು ಕಚೇರಿಗಳು ಸಹ ತೆರೆಯಲು ಅನುಮತಿ ನೀಡಲಾಗಿದೆ. ದೇವಾಲಯಗಳಲ್ಲಿ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ ನೀಡಲಾಗುವುದು. ಶೇ. ೫೦ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು. ಜಾತ್ರೆ, ಧರಣಿ, ರ‍್ಯಾಲಿ, ಪ್ರತಿಭಟನೆಗಳಿಗೆ ನಿರ್ಬಂಧ ಹೇರಲಾಗಿದೆ. ಜಿಮ್, ಈಜುಕೊಳ, ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ೫೦%ರ ನಿಯಮ ಮುಂದುವರೆಯಲಿದೆ. ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್‌ಗಳು, ರಂಗಮAದಿರಗಳು, ಆಡಿಟೋರಿಯಂಗಳು ಶೇ. ೫೦ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. ೨ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ತಂತ್ರಜ್ಞರ ಮಾಹಿತಿ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅವರು ಹೇಳಿದ ಪ್ರಕಾರ ಈ ಆದೇಶವನ್ನು ಹೊರಡಿಸಿದ್ದೇವೆ ಎಂದು ಹೇಳಿದರು. ಬೆಂಗಳೂರು ಸೇರಿದಂತೆ ಕೋವಿಡ್ ಹೆಚ್ಚಳವಿದ್ದ ಜಿಲ್ಲೆಗಳಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳ ಭೌತಿಕ ತರಗತಿಗಳು ಕೂಡ ತಾ. ೩೧ ರಂದು ಪುನಾರಂಭವಾಗಲಿದೆ. ಒಂದು ವೇಳೆ ಶಾಲೆಯ ಯಾವುದೇ ತರಗತಿಯ ಮಕ್ಕಳಿಗೆ ಕೋವಿಡ್ ಬಂದಲ್ಲಿ ಆ ತರಗತಿ ಮಾತ್ರ ಮುಚ್ಚಲಾಗುತ್ತದೆ. ಆ ತರಗತಿಯ ಎಲ್ಲಾ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಆಯಾ ನಿರ್ದಿಷ್ಟ ತರಗತಿಯನ್ನು ಆನ್‌ಲೈನ್ ಮೋಡ್‌ಗೆ ವರ್ಗಾಯಿಸಲಾಗುತ್ತದೆ. ಶಾಲೆಗಳು ಆರಂಭವಾದ ನಂತರ ಕೋವಿಡ್ ಪಾಸಿಟಿವ್ ಕಂಡುಬAದರೆ ಶಾಲೆಗಳನ್ನು ಮುಚ್ಚುವ ತೀರ್ಮಾನವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ಹೇಳಿದರು.