ಮಡಿಕೇರಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರುಕೊಲ್ಲಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಚೆಟ್ರಂಡ ನವೀನ್ ಅವರು ಧ್ವಜಾರೋಹಣ ನೆರವೇರಿಸಿದರು.

ಎಸ್‌ಡಿಎಂಸಿ ಅಧ್ಯಕ್ಷೆ ನಳಿನಿ ಕಾವೇರಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಭಾಕರ್ (ಮಾಜಿ ಸೈನಿಕರು), ಗ್ರಾಮಸ್ಥರಾದ ಮಾಲೇರ ವಿಜು, ಸಜೀರ್ ಎನ್.ಎಂ, ಗೋಪಿಕೃಷ್ಣ, ಮಧು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಸುAಟಿಕೊಪ್ಪ: ಇಲ್ಲಿನ ಏಳನೇ ಹೊಸಕೋಟೆ ಗ್ರಾಮ ಪಂಚಾಯಿತಿ ತೊಂಡೂರು ಗ್ರಾಮದಲ್ಲಿ ವಿಕಾಸ್ ಜನಾಸೇವಾ ಟ್ರಸ್ಟ್ ಜೀವನ ದಾರಿ ಅನಾಥ ಆಶ್ರಮದ ವತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅದಿsಕಾರಿ ನಂದೀಶ, ಪಂಚಾಯಿತಿ ಅಧ್ಯಕ್ಷ ರಮೇಶ್, ಸದಸ್ಯರಾದ ಸೌಮ್ಯ, ಸಿಂಧು, ಮಧು, ಚಂದ್ರಾವತಿ, ಜೀವನದಾರಿ ಆಶ್ರಮದ ಅಧ್ಯಕ್ಷ ಹೆಚ್.ಕೆ. ರಮೇಶ್, ರೂಪ ರಮೇಶ್ ಇದ್ದರು. ಸುಂಟಿಕೊಪ್ಪ ಸಂತ ಅಂತೋಣಿ ಶಾಲೆಯ ವಿದ್ಯಾರ್ಥಿನಿ ಶ್ರೀಷ ಗಣರಾಜ್ಯೋತ್ಸವದ ಭಾಷಣ ಮಾಡಿದರು. ಆಶ್ರಮ ನಿವಾಸಿಗಳಿಗೆ ಪಂಚಾಯಿತಿ ವತಿಯಿಂದ ಸ್ಯಾನಿಟೈಸರ್ ಸ್ಟಾö್ಯಂಡ್ ನೀಡಲಾಯಿತು.ಕಡಂಗ: ಸಮೀಪದ ವಿಜಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ನಂತರ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಶಿಕ್ಷಕ ನೆರವೇರಿಸಿದರು. ಈ ಸಂದರ್ಭ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಾಲೆಯ ಶಿಕ್ಷಕ ವೃಂದದವರು ಹಾಜರಿದ್ದರು.ಮಡಿಕೇರಿ: ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉದ್ಭವ್ ಸಂಸ್ಥೆ ಬೆಂಗಳೂರು ಇವರ ಸಹಯೋಗದೊಂದಿಗೆ ಸಂಪಾಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಮತ್ತು ಸದಸ್ಯರು, ಲಯನ್ಸ್ ಸಂಸ್ಥೆ ಅಧ್ಯಕ್ಷರು ಮತ್ತು ಸದಸ್ಯರು, ಆಸ್ಪತ್ರೆಯ ಆಡಳಿತಾಧಿಕಾರಿಗಳು, ಸಿಬ್ಬಂದಿ ವರ್ಗದವರ ಸಮ್ಮುಖದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ನೆರವೇರಿಸಲಾಯಿತು.

ಹಾಗೆಯೇ ಉದ್ಭವ್ ಸಂಸ್ಥೆ ಮತ್ತು ಲಯನ್ಸ್ ಸಂಸ್ಥೆಯಿAದ ರೋಗಿಗಳಿಗೆ ಹಣ್ಣು ಮತ್ತು ಸಿಹಿ ಹಂಚಲಾಯಿತು.ಪೊನ್ನAಪೇಟೆ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಬಿ.ಎಸ್. ರಘುನಾಥ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬೊಟ್ಟಂಗಡ ದಶಮಿ, ಪಿ.ಡಿ.ಓ. ಪುಟ್ಟರಾಜು, ಗ್ರಾ.ಪಂ. ಸದಸ್ಯರಾದ ಪಿ.ಕೆ. ವಿಜಯಕುಮಾರ್, ಕೆ.ವಿ. ರಾಮಕೃಷ್ಣ, ಮುಖ್ಯ ಶಿಕ್ಷಕ ಬಿ.ಎಂ. ವಿಜಯ, ಅಂರ‍್ರಾಷ್ಟಿçÃಯ ವಯಸ್ಕರ ಓಟಗಾರ ಪೆಮ್ಮಂಡ ಅಪ್ಪಯ್ಯ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳಾದ ಸುನೈನ, ದೀಪು, ನೈವೇದ್ಯ, ವಿನೋದ್, ಘನಾಶ್ಯಾಮ ಶರ್ಮ, ಸೌಮ್ಯ ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶಕೀಲ ಬಾನು ವಂದಿಸಿದರು.ಕಡAಗ: ಅಮ್ಮತ್ತಿ ಪೊಲೀಸ್ ಠಾಣೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ ನಂತರ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಕಾರ್ಯಕ್ರಮವನ್ನು ಉಪಠಾಣಾಧಿಕಾರಿ ವೆಂಕಟೇಶ್ ಅವರು ನೆರವೇರಿಸಿದರು. ಈ ಸಂದರ್ಭ ಅಮ್ಮತ್ತಿ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಾದ ಉತ್ತಪ್ಪ, ಅಂಬರೀಶ್ ಹಾಜರಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು.ಕಣಿವೆ: ಕುಶಾಲನಗರದ ಗುಂಡೂರಾವ್ ಹಾಗೂ ಆರ್.ಕೆ. ಲೇಔಟ್ ಬಡಾವಣೆಗಳ ನಿವಾಸಿಗಳಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಬಡಾವಣೆಯ ಉದ್ಯಾನದಲ್ಲಿ ಒಂದೆಡೆ ಜಮಾಯಿಸಿದ ನಿವಾಸಿಗಳು ಪರಸ್ಪರ ಸಿಹಿ ಹಂಚಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭ ಹಿರಿಯ ನಿವಾಸಿ ಜಿ.ಎಲ್. ನಾಗರಾಜು, ನಾಗೇಂದ್ರ, ಶಾಂತಕುಮಾರ್, ಸಂದೀಪ್, ವಸಂತ್, ಹಮೀದ್, ಮಂಜುನಾಥ್, ಕಮಲ್ ರಾಜ್ ಇದ್ದರು.