ಮಡಿಕೇರಿ, ಜ. ೩೦: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯ ಕೋಟೆ ಆವರಣ ಮತ್ತು ದೇವಟ್ ಪರಂಬುವಿನಲ್ಲಿ ಅಂತರ ರಾಷ್ಟಿçÃಯ ಹತ್ಯಾಕಾಂಡದ ಸ್ಮರಣೆ ದಿನವನ್ನು ಆಚರಿಸಿತು.

ಎರಡೂ ಪ್ರದೇಶಗಳಿಗೆ ಭೇಟಿ ನೀಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಹಾಗೂ ಪ್ರಮುಖರು ಹತ್ಯೆಗೀಡಾದ ಕೊಡವರಿಗೆ ಪುಷ್ಪ ನಮನ ಸಲ್ಲಿಸಿದರು. ಅರಸರ ಆಳ್ವಿಕೆಯ ಕಾಲದಲ್ಲಿ ರಾಜಕೀಯ ಷಡ್ಯಂತ್ರದಿAದ ಕೊಡವರ ನರಮೇಧವಾಗಿದೆ. ದೇವಟ್ ಪರಂಬುವಿನಲ್ಲಿ ಸಾವಿರಾರು ಕೊಡವರು ಬಲಿಯಾಗಿದ್ದಾರೆ. ಬುಡಕಟ್ಟು ಜನಾಂಗ ಕೊಡವರ ಹತ್ಯೆ ಘೋರ ದುರಂತವಾಗಿದ್ದು, ಅಂತರ ರಾಷ್ಟಿçÃಯ ಮಟ್ಟದ ಸ್ಮಾರಕ ನಿರ್ಮಾಣ ಮಾಡುವ ಅಗತ್ಯವಿದೆ. ಆ ಮೂಲಕ ಮಡಿದವರಿಗೆ ಗೌರವ ಸಲ್ಲಿಸುವ ಕಾರ್ಯ ನಡೆಯಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು.

ಸಿಎನ್‌ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಅರೆಯಡ ಗಿರೀಶ್, ಕೂಪದಿರ ಸಾಬು, ಪುಟ್ಟಿಚಂಡ ದೇವಯ್ಯ, ನಂದೇಟಿರ ರಾಜ ಮತ್ತಿತರರು ಪುಷ್ಪ ನಮನ ಸಲ್ಲಿಸಿದರು.