ಮಡಿಕೇರಿ, ಫೆ. ೪ : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಗರದ ತ್ಯಾಗರಾಜ ಕಾಲೋನಿ ಕೊಳಚೆ ಪ್ರದೇಶದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಸುಮಾರು ರೂ. ೫೦ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ತ್ಯಾಗರಾಜ ಕಾಲೋನಿಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಡಾಂಬರ್ ರಸ್ತೆ ಹಾಗೂ ಚರಂಡಿ ಕಾಮಗಾರಿ ರೂ. ೫೦ ಲಕ್ಷ ಬಿಡುಗಡೆ ಮಾಡಲಾಗಿದೆ. ‘ನಗರೋತ್ಥಾನ ಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಡಿಕೇರಿ ನಗರಕ್ಕೆ ರೂ. ೪೦ ಕೋಟಿ ಬಿಡುಗಡೆಗೊಳಿಸಲಿದ್ದು, ಆ ದಿಸೆಯಲ್ಲಿ ನಗರೋತ್ಥಾನ ಕಾಮಗಾರಿ ಸಂಬAಧ ಅಗತ್ಯ ಅಂದಾಜು ಪಟ್ಟಿಯ ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದರು.

ಸೋಮವಾರಪೇಟೆಯ ಹಾಕಿ ಟರ್ಫ್ ಕಾಮಗಾರಿಗೆ ಸಂಬAಧಿಸಿದAತೆ ಪ್ರತಿಕ್ರಿಯಿಸಿದ ಅಪ್ಪಚ್ಚು ರಂಜನ್ ಅವರು ಕ್ರೀಡಾ ಸಚಿವರಾಗಿದ್ದ ಸಂದರ್ಭದಲ್ಲಿ ರೂ. ೫ ಕೋಟಿ ಬಿಡುಗಡೆ ಮಾಡಿಸಲಾಗಿತ್ತು, ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಇನ್ನು ಒಂದು ತಿಂಗಳಲ್ಲಿ ಸೋಮವಾರಪೇಟೆಯ ಹಾಕಿ ಟರ್ಫ್ ಕಾಮಗಾರಿ ಪೂರ್ಣಗೊಳ್ಳಲಿದೆ.

ಹೆಚ್ಚುವರಿ ಕಾಮಗಾರಿಗೆ ರೂ. ೮೦ ಲಕ್ಷ

(ಮೊದಲ ಪುಟದಿಂದ) ಬೇಕಿದ್ದು ಬಿಡುಗಡೆ ಮಾಡಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ನಗರಸಭೆ ಅಧ್ಯಕ್ಷೆÀ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯರಾದ ಮೇರಿ ವೇಗಸ್ ಕೆ.ಎಸ್.ರಮೇಶ್, ಮಹೇಶ್ ಜೈನಿ, ಚಿತ್ರಾವತಿ, ಮನ್ಸೂರ್ ಅಲಿ, ಎಸ್.ಸಿ. ಸತೀಶ್, ಅಮೀನ್ ಮೊಹಿಸಿನ್, ಕಲಾವತಿ, ಉಮೇಶ್ ಸುಬ್ರಮಣಿ, ಅಪ್ಪಣ್ಣ, ಶ್ವೇತಾ, ಸಬಿತಾ, ಮಂಜುಳಾ, ಉಷಾ ಕಾವೇಪ್ಪ ಇತರರು ಇದ್ದರು.